ADVERTISEMENT

ಬೀದರ್: ಬಿಜೆಪಿ ಕಚೇರಿಯಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ

​ಪ್ರಜಾವಾಣಿ ವಾರ್ತೆ
Published 12 ಜನವರಿ 2022, 11:26 IST
Last Updated 12 ಜನವರಿ 2022, 11:26 IST
ಬೀದರ್‌ನ ಬಿಜೆಪಿ ಜಿಲ್ಲಾ ಘಟಕದ ಕಚೇರಿಯಲ್ಲಿ ಯುವ ಮೋರ್ಚಾ ನಗರ ಘಟಕದ ವತಿಯಿಂದ ಸ್ವಾಮಿ ವಿವೇಕಾನಂದರ ಜಯಂತಿ ಆಚರಿಸಲಾಯಿತು
ಬೀದರ್‌ನ ಬಿಜೆಪಿ ಜಿಲ್ಲಾ ಘಟಕದ ಕಚೇರಿಯಲ್ಲಿ ಯುವ ಮೋರ್ಚಾ ನಗರ ಘಟಕದ ವತಿಯಿಂದ ಸ್ವಾಮಿ ವಿವೇಕಾನಂದರ ಜಯಂತಿ ಆಚರಿಸಲಾಯಿತು   

ಬೀದರ್: ಬಿಜೆಪಿ ಯುವ ಮೋರ್ಚಾ ನಗರ ಘಟಕದ ವತಿಯಿಂದ ಇಲ್ಲಿಯ ಪಕ್ಷದ ಜಿಲ್ಲಾ ಘಟಕದ ಕಚೇರಿಯಲ್ಲಿ ಸ್ವಾಮಿ ವಿವೇಕಾನಂದರ 159ನೇ ಜಯಂತಿ ಆಚರಿಸಲಾಯಿತು.

ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಮಂಠಾಳಕರ್ ಅವರು, ಯುವಕರು ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.

ಪಕ್ಷದ ಕಲಬುರ್ಗಿ ವಿಭಾಗ ಸಹ ಪ್ರಭಾರಿಗಳಾದ ಈಶ್ವರಸಿಂಗ್ ಠಾಕೂರ್, ಸೂರ್ಯಕಾಂತ ಧೋನಿ, ಸಂಘಟನಾ ಕಾರ್ಯದರ್ಶಿ ಅರುಣ ಬಿನ್ನಾಡಿ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಅರಹಂತ ಸಾವಳೆ, ಮಲ್ಲಿಕಾರ್ಜುನ ಕುಂಬಾರ, ಕಾರ್ಯಾಲಯ ಕಾರ್ಯದರ್ಶಿ ರಾಜಕುಮಾರ ಪಾಟೀಲ ನ್ಯಾಮತಾಬಾದ್, ಯುವ ಮೋರ್ಚಾ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಸ್ವಾಮಿ, ನಗರ ಘಟಕದ ಅಧ್ಯಕ್ಷ ಅಂಬರೀಷ್ ಬಟನಾಪುರೆ, ಸಂತೋಷ ಕಾಳೆ, ತಾನಾಜಿ, ದೀಪಕ್ ಚಿದ್ರಿ, ಪವನ್ ಉಂಡೆ, ಮಹೇಶ ವಿಶ್ವಕರ್ಮ, ಸಚಿನ್ ಚಿಮಕೋಡೆ, ಸಂಜಯ ಜೀರ್ಗೆ, ವಿಶಾಲ್ ಅತಿವಾಳೆ, ಸತೀಶ ಸೆಟಗೊಂಡ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.