ADVERTISEMENT

ಲಸಿಕೆ ಪಡೆದು ಭಕ್ತರಲ್ಲಿ ಜಾಗೃತಿ ಮೂಡಿಸಿದ ಪಂಚಾಕ್ಷರಿ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 22 ಜೂನ್ 2021, 4:56 IST
Last Updated 22 ಜೂನ್ 2021, 4:56 IST
ಹುಲಸೂರ ತಾಲ್ಲೂಕಿನ ಬೇಲೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉರಿಲಿಂಗ ಪೆದ್ದಿ ಮಠದ ಪಂಚಾಕ್ಷರಿ ಸ್ವಾಮೀಜಿ ಲಸಿಕೆ ಪಡೆದರು
ಹುಲಸೂರ ತಾಲ್ಲೂಕಿನ ಬೇಲೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉರಿಲಿಂಗ ಪೆದ್ದಿ ಮಠದ ಪಂಚಾಕ್ಷರಿ ಸ್ವಾಮೀಜಿ ಲಸಿಕೆ ಪಡೆದರು   

ಬೇಲೂರು (ಹುಲಸೂರ): ತಾಲ್ಲೂಕಿನ ಬೇಲೂರ ಮಠದ ಉರಿಲಿಂಗ ಪೆದ್ದಿ ಮಠದ ಪೀಠಾಧಿಪತಿ ಪಂಚಾಕ್ಷರಿ ಸ್ವಾಮೀಜಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೋಮವಾರ ಕೋವಿಡ್‌ ಲಸಿಕೆ ಪಡೆದು ಭಕ್ತರಲ್ಲಿ ಜಾಗೃತಿ ಮೂಡಿಸಿದರು.

‘ಲಾಕ್‌ಡೌನ್‌ ಸಡಿಲಿಕೆಗೊಳಿಸಿದ ಮಾತ್ರಕ್ಕೆ ಜನರು ಅಜಾಗರೂಕತೆಯಿಂದ ಅಲೆದಾಡಬಾರದು’ ಎಂದು ಸಲಹೆ ನೀಡಿದರು.

ತಹಶೀಲ್ದಾರ್‌ ಶಿವಾನಂದ ಮೇತ್ರೆ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಿದ್ರಾಮ ಕಾಮಣ್ಣ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ರವಿ ಗುಂಗೆ, ಡಾ.ಪ್ರತಾಪ ಬಿರಾದಾರ, ಗ್ರಾ.ಪಂ ಮಾಜಿ ಅಧ್ಯಕ್ಷ ನವನಾಥ ಬೆಳ್ಳೆ, ಆರ್‌ಐ ಮೌನೇಶ್ವರ ಸ್ವಾಮಿ, ಪಿಡಿಒ ಮಹಾರುದ್ರಪ್ಪ, ವಿನೋದ ಸಿಂಧೆ, ಸುಶೀಲಕುಮಾರ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.