ADVERTISEMENT

ಬೋಳೇಶಂಕರ, ಕೃಷ್ಣೇಗೌಡರ ಆನೆ ನಾಟಕ ಪ್ರದರ್ಶನ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2024, 15:45 IST
Last Updated 25 ಸೆಪ್ಟೆಂಬರ್ 2024, 15:45 IST
ಭಾಲ್ಕಿ ತಾಲ್ಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲದಲ್ಲಿ ಕಲಬುರಗಿಯ ಶ್ರೀ ರಂಗ ಕಲಾ ತಂಡದ ಕಲಾವಿದರು ನಡೆಸಿಕೊಟ್ಟ ಪಿಯುಸಿ ಪಠ್ಯ ಆಧಾರಿತ ಬೋಳೇಶಂಕರ ನಾಟಕ ಪ್ರದರ್ಶನ ಗಮನ ಸೆಳೆಯಿತು
ಭಾಲ್ಕಿ ತಾಲ್ಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲದಲ್ಲಿ ಕಲಬುರಗಿಯ ಶ್ರೀ ರಂಗ ಕಲಾ ತಂಡದ ಕಲಾವಿದರು ನಡೆಸಿಕೊಟ್ಟ ಪಿಯುಸಿ ಪಠ್ಯ ಆಧಾರಿತ ಬೋಳೇಶಂಕರ ನಾಟಕ ಪ್ರದರ್ಶನ ಗಮನ ಸೆಳೆಯಿತು   

ಭಾಲ್ಕಿ: ‘ಪಠ್ಯ ಆಧಾರಿತ ನಾಟಕಗಳು ವಿದ್ಯಾರ್ಥಿಗಳ ಕಲಿಕೆಗೆ ಸಹಕಾರಿಯಾಗಿವೆ’ ಎಂದು ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್‌ನ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಹೇಳಿದರು.

ತಾಲ್ಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲದ ಅನುಭವ ಮಂಟಪದಲ್ಲಿ ಬುಧವಾರ ಆಯೋಜಿಸಿದ್ದ ಪಿಯುಸಿ ಪಠ್ಯ ಆಧಾರಿತ ಬೋಳೇಶಂಕರ, ಕೃಷ್ಣೇಗೌಡರ ಆನೆ ನಾಟಕ ಪ್ರದರ್ಶನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಾಲ್ಕು ಗೋಡೆಯ ಕೊಠಡಿ ಒಳಗೆ ಒಬ್ಬ ಶಿಕ್ಷಕ ಪಾಠ ಮಾಡುವುದಕ್ಕಿಂತ, ಆ ಪಾಠವನ್ನು ನಾಟಕ ಚಟುವಟಿಕೆಯ ಮೂಲಕ ಹೇಳುವುದರಿಂದ ವಿದ್ಯಾರ್ಥಿಗಳ ಮೇಲೆ ದೊಡ್ಡ ಪರಿಣಾಮ ಬೀರಲಿದೆ. ಇದರಿಂದ ಅವರ ಕಲಿಕೆಯಲ್ಲಿ ಸಾಕಷ್ಟು ಬದಲಾವಣೆ ಕಾಣಬಹುದು ಎಂದರು.

ADVERTISEMENT

ಚಂದ್ರಶೇಖರ ಕಂಬಾರ ರಚಿಸಿದ ಬೋಳೇಶಂಕರ, ಪೂರ್ಣಚಂದ್ರ ತೇಜಸ್ವಿ ರಚಿಸಿದ ಕೃಷ್ಣೇಗೌಡರ ಆನೆ ನಾಟಕದ ಮೂಲಕ ಕಲಬುರಗಿಯ ರಂಗ ಕಲಾ ತಂಡದ ಕಲಾವಿದರು ಪಠ್ಯ ಆಧಾರಿತ ವಿಷಯಗಳನ್ನು ವಿದ್ಯಾರ್ಥಿಗಳ ಮನಸ್ಸಿನಲ್ಲಿ ಬೇರೂರುವಂತೆ ಅಭಿನಯಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು.

ಪೀಠಾಧಿಪತಿ ಗುರುಬಸವ ಪಟ್ಟದ್ದೇವರು, ಮಹಾಲಿಂಗ ಸ್ವಾಮೀಜಿ, ಶಿವಾನಂದ ಸ್ವಾಮೀಜಿ, ಬಸವಲಿಂಗ ಸ್ವಾಮೀಜಿ, ಕಲ್ಯಾಣರಾವ್ ಪಾಟೀಲ, ಉಪನ್ಯಾಸಕರಾದ ಲಚಮ್ಮಾ ರೆಡ್ಡಿ, ಉಪ ಪ್ರಾಚಾರ್ಯ ಸಿದ್ರಾಮ ಗೊಗ್ಗಾ, ಮಧುಕರ ಗಾಂವಕರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.