ADVERTISEMENT

ಬೀದರ್‌ | ನಿಲ್ಲದ ಮಳೆ: ಎರಡನೇ ದಿನವೂ ವೈಮಾನಿಕ ಪ್ರದರ್ಶನ ರದ್ದು

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2023, 11:43 IST
Last Updated 9 ಸೆಪ್ಟೆಂಬರ್ 2023, 11:43 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೀದರ್‌: ಸತತ ಸುರಿಯುತ್ತಿರುವ ಮಳೆಯಿಂದಾಗಿ ನಗರದ ಬಹಮನಿ ಕೋಟೆಯ ಆಗಸದಲ್ಲಿ ಏರ್ಪಡಿಸಿದ್ದ ಎರಡನೇ ದಿನದ ವೈಮಾನಿಕ ಪ್ರದರ್ಶನ (ಏರ್‌ ಶೋ) ಕೂಡ ಶನಿವಾರ ಜಿಲ್ಲಾಡಳಿತ ರದ್ದುಪಡಿಸಿತು.

ಬೆಳಿಗ್ಗೆಯಿಂದ ಕಾರ್ಮೋಡ ಕವಿದ ವಾತಾವರಣ ಇದೆ. ಬಿಟ್ಟು ಬಿಟ್ಟು ಜಿಟಿಜಿಟಿ ಮಳೆ ಸುರಿಯುತ್ತಿದೆ. ವಾತಾವರಣ ಸರಿ ಇಲ್ಲದ ಕಾರಣ ಸೂರ್ಯಕಿರಣ ಏರೋಬ್ಯಾಟಿಕ್‌ ತಂಡದ ವೈಮಾನಿಕ ಪ್ರದರ್ಶನ ರದ್ದುಗೊಳಿಸಲಾಯಿತು.

ADVERTISEMENT

‘ಅಕ್ಟೋಬರ್‌ನಲ್ಲಿ ಏರ್‌ ಶೋ ಹಮ್ಮಿಕೊಳ್ಳಲಾಗುವುದು. ಶೀಘ್ರವೇ ದಿನಾಂಕ ಘೋಷಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ತಿಳಿಸಿದ್ದಾರೆ.

ಶುಕ್ರವಾರ ಶಾಲಾ, ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಏರ್‌ ಶೋ ಹಮ್ಮಿಕೊಳ್ಳಲಾಗಿತ್ತು. ಆದರೆ, ಮಳೆಯಿಂದ ರದ್ದುಪಡಿಸಲಾಗಿತ್ತು. ಶಾಲಾ, ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರ ವೀಕ್ಷಣೆಗೆ ಶನಿವಾರ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಒಂದು ವಾರದಿಂದ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ, ಬಿಟ್ಟು ಬಿಟ್ಟು ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.