ಖಟಕಚಿಂಚೋಳಿ: ಭಾಲ್ಕಿ ತಾಲ್ಲೂಕಿನ ನೆಲವಾಡ್ ಗ್ರಾಮದಲ್ಲಿ ಮಂಗಳವಾರ ಸಂಜೆ ವಿದ್ಯುತ್ ತಂತಿ ತುಳಿದು ಅಂಕುಶ ದಿಗಂಬರ್ ವಿರೋಜಿ (28) ಮೃತಪಟ್ಟಿದ್ದಾರೆ.
ಬಿರುಗಾಳಿ ಮಿಶ್ರಿತ ಮಳೆ ಸುರಿದ ಕಾರಣ ಗ್ರಾಮದಲ್ಲಿನ ವಿದ್ಯುತ್ ಕಂಬದ ತಂತಿ ಕಡಿದಿದೆ. ಹೊಲದಿಂದ ಬರುತ್ತಿದ್ದ ಈ ಯುವಕ ಕಡಿದ ತಂತಿ ಮೇಲೆ ಕಾಲಿಟ್ಟ ಕಾರಣ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಖಟಕಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.