ಬಸವಕಲ್ಯಾಣ (ಬೀದರ್ ಜಿಲ್ಲೆ): ಶಾಸಕ ಶರಣು ಸಲಗರ ಅವರ ಪತ್ನಿ ಸಾವಿತ್ರಿ ಸಲಗರ ಇಲ್ಲಿನ ತಹಶೀಲ್ದಾರ್ ಆಗಿ ಶುಕ್ರವಾರ ಅಧಿಕಾರ ಸ್ವೀಕರಿಸಿದರು.
ಸಾವಿತ್ರಿ ಅವರು ಎರಡು ವರ್ಷಗಳಿಂದ ಇಲ್ಲಿಯೇ ತಹಶೀಲ್ದಾರ್ ಆಗಿದ್ದರು. ಉಪಚುನಾವಣೆ ಕಾರಣ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಶರಣು ಅವರು ಗೆದ್ದು ಶಾಸಕರಾದ ನಂತರ ವಾರದ ಒಳಗಾಗಿ ಮತ್ತೆ ಅವರು ಈ ಸ್ಥಾನಕ್ಕೆ ಮರಳಿದ್ದಾರೆ.
‘ಇಲ್ಲಿನ ಸಮಸ್ಯೆ ಬಗ್ಗೆ ಸಾವಿತ್ರಿ ಅವರಿಗೆ ಪೂರ್ಣ ಅರಿವಿದೆ’ ಎಂದುಶರಣು ಸಲಗರಹೇಳಿದರು.
‘ಪತಿ ಶಾಸಕರಾಗಿ ಅವರ ಕೆಲಸ ಅವರು ಮಾಡುತ್ತಾರೆ. ನನ್ನ ಕಾರ್ಯವನ್ನು ನಾನು ನಿರ್ವಹಿಸುತ್ತೇನೆ’ ಎಂದುಸಾವಿತ್ರಿ ಪ್ರತಿಕ್ರಿಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.