ಬಸವಕಲ್ಯಾಣ: 'ಬಿಜೆಪಿಯಿಂದ ಉಚ್ಛಾಟಿಸಿರುವ ಪತ್ರ ನನ್ನ ಕೈ ಸೇರಿಲ್ಲ' ಎಂದು ಈ ಕ್ಷೇತ್ರದ ಉಪ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಆಗಿರುವ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಹೇಳಿದ್ದಾರೆ.
'ಅಲ್ಲದೆ ನನಗೆ ಈ ಬಗ್ಗೆ ಮಾಹಿತಿಯೇ ಇಲ್ಲ. ಆದ್ದರಿಂದ ಪ್ರತಿಕ್ರಿಯಿಸುವ ಪ್ರಶ್ನೆಯೇ ಇಲ್ಲ' ಎಂದು ಹೇಳಿದ್ದಾರೆ.
'ಉಪಚುನಾವಣೆಯಲ್ಲಿ ಚತುಷ್ಕೋನ ಸ್ಪರ್ಧೆ ಏರ್ಪಟ್ಟಿದೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಜತೆ ನನಗೂ ಬಹುಸಂಖ್ಯಾತ ಮತಗಳು ದೊರೆತಿವೆ. ಹೀಗಾಗಿ ಜಯದ ಭರವಸೆಯಿದೆ' ಎಂದೂ ಖೂಬಾ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.