ADVERTISEMENT

ಭಗತ್‍ಸಿಂಗ್ ಹುತಾತ್ಮ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2020, 17:17 IST
Last Updated 23 ಮಾರ್ಚ್ 2020, 17:17 IST
ಬೀದರ್‌ನ ಭಗತ್‍ಸಿಂಗ್ ವೃತ್ತದಲ್ಲಿ ಸೋಮವಾರ ಭಗತ್‍ಸಿಂಗ್ ಹುತಾತ್ಮ ದಿನವನ್ನು ಸಾಂಕೇತಿಕವಾಗಿ ಆಚರಿಸಲಾಯಿತು
ಬೀದರ್‌ನ ಭಗತ್‍ಸಿಂಗ್ ವೃತ್ತದಲ್ಲಿ ಸೋಮವಾರ ಭಗತ್‍ಸಿಂಗ್ ಹುತಾತ್ಮ ದಿನವನ್ನು ಸಾಂಕೇತಿಕವಾಗಿ ಆಚರಿಸಲಾಯಿತು   

ಬೀದರ್: ಕೊರೊನಾ ಸೋಂಕಿನ ಪ್ರಯುಕ್ತ ನಗರದಲ್ಲಿ ಭಗತ್‍ಸಿಂಗ್, ಸುಖ್‍ದೇವ್ ಹಾಗೂ ರಾಜಗುರು ಅವರ ಹುತಾತ್ಮ ದಿನವನ್ನು ಸೋಮವಾರ ಸಾಂಕೇತಿಕವಾಗಿ ಆಚರಿಸಲಾಯಿತು.

ಭಗತ್‍ಸಿಂಗ್ ವೃತ್ತದಲ್ಲಿನ ಪುತ್ಥಳಿಗೆ ಪೂಜೆ ಸಲ್ಲಿಸಿ, ಹೂಮಾಲೆ ಹಾಕಿ ಗೌರವ ಸಲ್ಲಿಸಲಾಯಿತು.

‘ಭಗತ್‍ಸಿಂಗ್ ಅವರು ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದರು’ ಎಂದು ಭಗತ್‍ಸಿಂಗ್ ವೃತ್ತದ ಸಂಸ್ಥಾಪಕ ವಿಜಯಕುಮಾರ ಸೋನಾರೆ ಹೇಳಿದರು.

ADVERTISEMENT

ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಸುನೀಲ ಭಾವಿಕಟ್ಟಿ, ಅಂಬೇಡ್ಕರ್ ಯುವ ಸೇನೆಯ ರಾಜ್ಯ ಘಟಕದ ಉಪಾಧ್ಯಕ್ಷ ಎಂ.ಪಿ. ಮುದಾಳೆ, ಜೈ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀಮಂತ ಸಪಾಟೆ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.