ಔರಾದ್: ತಾಲ್ಲೂಕಿನ ವನಮಾರಪಳ್ಳಿ ಗ್ರಾಮದ ಹೊರವಲಯದ ಕಿತ್ತೂರ ರಾಣಿ ಚೆನ್ನಮ್ಮ ವಸತಿ ನಿಲಯದಲ್ಲಿ ಕ್ವಾರಂಟೆನ್ನಲ್ಲಿದ್ದ ಯುವಕ ಮಂಗಳವಾರ ಬೆಳಿಗ್ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈತ ಮುಂಬೈನಿಂದ ತನ್ನ ಪತ್ನಿಯೊಂದಿಗೆ ಬಂದು ವಸತಿ ನಿಲಯದಲ್ಲಿ ಕ್ವಾರಂಟೆನ್ ಆಗಿದ್ದ. ಈತ ನಾರಾಯಣಪುರ ಗ್ರಾಮದವರು.
ಈಚೆಗೆ ಔರಾದ್ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ. ಔರಾದ್ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.