ಬೀದರ್: ಕೋವಿಡ್ ಹಾಗೂ ಅತಿವೃಷ್ಟಿಯಿಂದ ಜನ ಸಂಕಷ್ಟದಲ್ಲಿರುವ ಕಾರಣ ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್ ಈ ಬಾರಿ ತಮ್ಮ ಜನ್ಮದಿನ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸೇರಿ ಪ್ರತಿ ವರ್ಷ ಜ. 29ಕ್ಕೆ ಪ್ರೀತಿ, ಅಭಿಮಾನದಿಂದ ತಮ್ಮ ಜನ್ಮದಿನ ಕಾರ್ಯಕ್ರಮ ಸಂಘಟಿಸುತ್ತಿದ್ದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕೇಕ್ ಕತ್ತರಿಸುತ್ತಿದ್ದೆ. ಆದರೆ, ಈ ವರ್ಷ ಕೋವಿಡ್ನಿಂದ ಇಡೀ ವಿಶ್ವವೇ ತೊಂದರೆಯಲ್ಲಿದೆ. ಬೀದರ್ ಸೇರಿ ಕಲ್ಯಾಣ ಕರ್ನಾಟಕ ಭಾಗದ ಜನ ಅತಿವೃಷ್ಟಿ ಹೊಡೆತಕ್ಕೆ ಒಳಗಾಗಿದ್ದಾರೆ. ಇಂಥ ಸಂದರ್ಭದಲ್ಲಿ ಸಾರ್ವಜನಿಕವಾಗಿ ಸಂಭ್ರಮ ಆಚರಿಸುವುದು ಸರಿಯಲ್ಲ ಎನ್ನುವ ಕಾರಣಕ್ಕೆ ಜನ್ಮದಿನ ಆಚರಣೆ ಮಾಡಿಕೊಳ್ಳದೇ ಇರಲು ತೀರ್ಮಾನಿಸಿದ್ದೇನೆ.
ಕಾರ್ಯಕರ್ತರು ಹಾಗೂ ಅಭಿಮಾನಿಗಳ ಪ್ರೀತಿ, ವಿಶ್ವಾಸಕ್ಕೆ ಚಿರಖುಣಿಯಾಗಿದ್ದೇನೆ. ಯಾರೂ ಶಾಲು, ಹಾರ, ತುರಾಯಿಗಳಿಗೆ ಹಣ ಖರ್ಚು ಮಾಡಬಾರದು ಎಂದು ಮನವಿ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.