ADVERTISEMENT

ಕೃಷಿ ಹೊಂಡದಲ್ಲಿ ಬಿದ್ದು ಮೂವರು ಸಹೋದರರ ಸಾವು

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2020, 16:04 IST
Last Updated 4 ಆಗಸ್ಟ್ 2020, 16:04 IST
ಭಾಲ್ಕಿ ತಾಲ್ಲೂಕಿನ ಚಳಕಾಪೂರವಾಡಿ ಗ್ರಾಮದ ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟ ಯುವಕರ ಶವಗಳನ್ನು ಟ್ರ್ಯಾಕ್ಟರ್‌ನಲ್ಲಿ ಸಾಗಿಸುತ್ತಿರುವುದು
ಭಾಲ್ಕಿ ತಾಲ್ಲೂಕಿನ ಚಳಕಾಪೂರವಾಡಿ ಗ್ರಾಮದ ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟ ಯುವಕರ ಶವಗಳನ್ನು ಟ್ರ್ಯಾಕ್ಟರ್‌ನಲ್ಲಿ ಸಾಗಿಸುತ್ತಿರುವುದು   

ಭಾಲ್ಕಿ (ಬೀದರ್‌ ಜಿಲ್ಲೆ):ತಾಲ್ಲೂಕಿನ ಚಳಕಾಪೂರವಾಡಿ ಗ್ರಾಮದಲ್ಲಿಮಂಗಳವಾರ ಕೃಷಿ ಹೊಂಡದಲ್ಲಿ ಬಿದ್ದುಒಂದೇ ಕುಟುಂಬದ ಮೂವರು ಮಕ್ಕಳು ಮೃತಪಟ್ಟಿದ್ದಾರೆ.

ಧೂಳಪ್ಪ ಬನ್ನಾಳೆ ಅವರ ಕಿರಿಯ ಮಗ ಹಣಮಂತ ರೆಡ್ಡಿ (16) ಪಕ್ಕದ ಜಮೀನಿನಲ್ಲಿರುವ ಕೃಷಿ ಹೊಂಡದಲ್ಲಿ ಮುಖ ತೊಳೆದುಕೊಳ್ಳಲು ಹೋದಾಗ ಕಾಲು ಜಾರಿ ನೀರಿನಲ್ಲಿ ಬಿದ್ದಿದ್ದಾನೆ. 18 ವರ್ಷದ ಎರಡನೇ ಮಗ ಕರಿಬಸವ ರೆಡ್ಡಿ ಸಹೋದರನನ್ನು ರಕ್ಷಿಸಲು ಹೋಗಿ ಅವನೂ ಹೊಂಡದಲ್ಲಿ ಬಿದ್ದಿದ್ದಾನೆ. ಇವರಿಬ್ಬರನ್ನು ರಕ್ಷಿಸಲು ಹೋದ 20 ವರ್ಷದ ಹಿರಿಯ ಸಹೋದರ ವೀರೇಂದ್ರರೆಡ್ಡಿ ನೀರಿನಲ್ಲಿ ಬಿದ್ದಿದ್ದಾನೆ. ಯಾರಿಗೂ ಈಜು ಬಾರದ ಕಾರಣ ಮೂವರೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT