ADVERTISEMENT

ಬೀದರ್: 114 ಮಂದಿಗೆ ಕೋವಿಡ್ ದೃಢ, ಮೂವರು ಸಾವು

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2020, 16:02 IST
Last Updated 4 ಆಗಸ್ಟ್ 2020, 16:02 IST
ಔರಾದ್‌ನ ಎಸ್‌ಬಿಐ ಬ್ಯಾಂಕಿನ ಸಿಬ್ಬಂದಿಯೊಬ್ಬರಿಗೆ ಕೋವಿಡ್‌ ಸೋಂಕು ತಗುಲಿದ ಕಾರಣ ಬ್ಯಾಂಕ್‌ ಸೀಲ್‌ಡೌನ್‌ ಮಾಡಲಾಗಿದೆ
ಔರಾದ್‌ನ ಎಸ್‌ಬಿಐ ಬ್ಯಾಂಕಿನ ಸಿಬ್ಬಂದಿಯೊಬ್ಬರಿಗೆ ಕೋವಿಡ್‌ ಸೋಂಕು ತಗುಲಿದ ಕಾರಣ ಬ್ಯಾಂಕ್‌ ಸೀಲ್‌ಡೌನ್‌ ಮಾಡಲಾಗಿದೆ   

ಬೀದರ್: ಜಿಲ್ಲೆಯಲ್ಲಿ ಮಂಗಳವಾರ 114 ಜನರಿಗೆ ಕೋವಿಡ್ ಸೋಂಕು ತಗುಲಿದೆ. ಅನಾರೋಗ್ಯದಿಂದ ಮೃತಪಟ್ಟಿದ್ದ ಮೂವರಿಗೆ ಸೋಂಕು ತಗುಲಿರುವುದು ಪರೀಕ್ಷೆಯ ನಂತರ ದೃಢಪಟ್ಟಿದೆ.

ಜಿಲ್ಲೆಯ 62 ವರ್ಷದ ಮಹಿಳೆ ಉಸಿರಾಟ ತೊಂದರೆಯಿಂದಾಗಿ ಆಗಸ್ಟ್‌ 1 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಆಗಸ್ಟ್‌ 3 ರಂದು ಕೊನೆಯುಸಿರೆಳೆದಿದ್ದರು. 85 ವರ್ಷದ ಪುರುಷ ಉಸಿರಾಟ ಸಮಸ್ಯೆ ಹಾಗೂ ಅಧಿಕ ರಕ್ತದೊತ್ತಡದಿಂದಾಗಿ ಜುಲೈ 30 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಆಗಸ್ಟ್‌ 1 ರಂದು ಸಾವಿಗೀಡಾಗಿದ್ದರು.

55 ವರ್ಷದ ಮತ್ತೊಬ್ಬದ ಮಹಿಳೆ ತೀವ್ರ ಜ್ವರ ಹಾಗೂ ಉಸಿರಾಟ ತೊಂದರೆಯಿಂದ ಜುಲೈ 29 ರಂದು ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದರೂ ಚಿಕಿತ್ಸೆ ಫಲಿಸದೆ ಆಗಸ್ಟ್ 2 ರಂದು ನಿಧನ ಹೊಂದಿದ್ದರು. ಈ ಮೂವರ ಗಂಟಲು ಮಾದರಿ ಪಡೆದು ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು. ಮಂಗಳವಾರ ವರದಿ ಪಾಸಿಟಿವ್ ಬಂದಿದೆ.

ADVERTISEMENT

ಕೋವಿಡ್ ಸೋಂಕಿತರ ಸಂಖ್ಯೆ 2,562ಕ್ಕೆ ತಲುಪಿದೆ. 781 ಕೋವಿಡ್‌ ಪ್ರಕರಣಗಳು ಸಕ್ರೀಯವಾಗಿವೆ. ಕೋವಿಡ್‌ ಕೇರ್‌ ಸೆಂಟರ್‌ ಹಾಗೂ ಕೋವಿಡ್ ಆಸ್ಪತ್ರೆಯಿಂದ 22 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಈವರೆಗೆ 1,692 ಮಂದಿ ಬಿಡುಗಡೆ ಹೊಂದಿದ್ದಾರೆ.

ಬೀದರ್ ತಾಲ್ಲೂಕಿನಲ್ಲಿ ಅತಿ ಹೆಚ್ಚು 39 ಜನರಿಗೆ ಸೋಂಕು ತಗುಲಿದೆ. ಹುಮನಾಬಾದ್ ತಾಲ್ಲೂಕಿನಲ್ಲಿ 23, ಔರಾದ್ ತಾಲ್ಲೂಕಿನಲ್ಲಿ 20, ಭಾಲ್ಕಿ ತಾಲ್ಲೂಕಿನಲ್ಲಿ 18 ಹಾಗೂ ಬಸವಕಲ್ಯಾಣ ತಾಲ್ಲೂಕಿನಲ್ಲಿ 14 ಕೋವಿಡ್ ಸೋಂಕು ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.