ADVERTISEMENT

ನೌಕರರ ಭವನದಲ್ಲಿ ಮಹಿಳಾ ದಿನಾಚರಣೆ ಇಂದು

ಮಹಿಳಾ ನೌಕರರಿಗೆ ಕ್ರೀಡಾಕೂಟ, 10 ಮಂದಿಗೆ ವಿಶೇಷ ಸನ್ಮಾನ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2023, 19:30 IST
Last Updated 25 ಮಾರ್ಚ್ 2023, 19:30 IST
ರಾಜೇಂದ್ರಕುಮಾರ ಗಂದಗೆ
ರಾಜೇಂದ್ರಕುಮಾರ ಗಂದಗೆ   

ಬೀದರ್: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ವತಿಯಿಂದ ನಗರದ ಪ್ರತಾಪನಗರದ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಮಾ. 26 ರಂದು ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2 ರ ವರೆಗೆ ಮಹಿಳಾ ನೌಕರರಿಗೆ ಬಲೂನ್ ಆಟ, ನಡಿಗೆ, ಬಾಂಬ್ ಇನ್ ದಿ ಸಿಟಿ (ಸಮೂಹ), ಹಗ್ಗ ಜಗ್ಗಾಟ (ಸಮೂಹ), ಮ್ಯುಸಿಕಲ್ ಚೇರ್, ರಂಗೋಲಿ, ಮಾಡೆಲಿಂಗ್ ಫ್ಯಾಷನ್, ಸ್ಮರಣ ಶಕ್ತಿ, ಲಿಂಬೆ-ಚಮಚ ಆಟ, ಸಮೂಹ ಸಾಂಸ್ಕøತಿಕ ಸ್ಪರ್ಧೆ (ಸಮೂಹ), ಗಾಯನ (ಸಮೂಹ ಮತ್ತು ವೈಯಕ್ತಿಕ) ಸ್ಪರ್ಧೆಗಳು ನಡೆಯಲಿವೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ರಾಜೇಂದ್ರಕುಮಾರ ಗಂದಗೆ ತಿಳಿಸಿದ್ದಾರೆ.
ಸಂಜೆ 5ಕ್ಕೆ ವೇದಿಕೆ ಕಾರ್ಯಕ್ರಮ ಜರುಗಲಿದೆ. ಲಿಂಗಾಯತ ಮಹಾಮಠದ ಅಕ್ಕ ಅನ್ನಪೂರ್ಣತಾಯಿ ದಿವ್ಯ ಸಾನಿಧ್ಯ ವಹಿಸುವರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಎಂ. ಜ್ಯೋತಿ ಪ್ರಜ್ವಲಿಸುವರು.
ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಾನತಿ ಎಂ.ಎ. ಉತ್ತಮ ಸೇವೆ ಸಲ್ಲಿಸಿದ 10 ಮಹಿಳಾ ನೌಕರರನ್ನು ಸನ್ಮಾನಿಸುವರು. ಎಸ್.ಎಸ್. ಸಿದ್ದಾರೆಡ್ಡಿ ಫೌಂಡೇಷನ್ ಗೌರವಾಧ್ಯಕ್ಷೆ ಗುರಮ್ಮ ಸಿದ್ದಾರೆಡ್ಡಿ ಅವರಿಗೆ ವಿಶೇಷ ಸನ್ಮಾನ ಮಾಡಲಾಗುವುದು. ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ವಿವಿಧ ಇಲಾಖೆಗಳ ಅಧಿಕಾರಿಗಳಾದ ಸುರೇಖಾ ಮುನ್ನೋಳಿ, ಸುವರ್ಣಾ ಯದಲಾಪುರೆ, ಎನ್. ಅಖಿಲಾಂಡೇಶ್ವರಿ, ಸಾರಿಕಾ ಗಂಗಾ ಪಾಲ್ಗೊಳ್ಳುವರು.
ಸಿದ್ದಮ್ಮ, ಕೆ. ಸುವರ್ಣಾ, ನಯನಾ ಕುಮಾರಿ ಕಲ್ಯಾಣಿ, ಗೀತಾ ಶಿವಕುಮಾರ ಗಡ್ಡಿ, ಅನುಸೂಯಾ, ಸವಿತಾ ಎನ್.ಎಂ, ಅಂಬಿಕಾ ಕನೇರಿ ಉಪಸ್ಥಿತರಿರುವರು. ಸಾಂಸ್ಕøತಿಕ ಚಟುವಟಿಕೆಗಳು ನೌಕರರ ಮನ ತಣಿಸಲಿವೆ.
ಮಹಿಳಾ ಸರ್ಕಾರಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.