ADVERTISEMENT

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2021, 14:40 IST
Last Updated 12 ಆಗಸ್ಟ್ 2021, 14:40 IST

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ

ಬೀದರ್‌: ಪಶು ಸಂಗೋಪನೆ ಸಚಿವ ಪ್ರಭು ಚವಾಣ್ ಆಗಸ್ಟ್ 13ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಅಂದು ಬೆಳಿಗ್ಗೆ 8.30ಕ್ಕೆ ಬೋಂತಿ ತಾಂಡಾದಿಂದ ನಿರ್ಗಮಿಸಿ, ಬೆಳಿಗ್ಗೆ 10 ಗಂಟೆಗೆ ಮರಖಲ್ ಗ್ರಾಮದಲ್ಲಿ ಗ್ರಾಮ-1 ಸೇವಾ ಕೇಂದ್ರವನ್ನು ಉದ್ಘಾಟಿಸುವರು. ಬಳಿಕ ಬೆಳಿಗ್ಗೆ 10.30ರಿಂದ ಸಂಜೆ 4.30ರವರೆಗೆ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆಯುವ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಪಾಲ್ಗೊಳ್ಳುವರು.
ಸಂಜೆ 4.30ಕ್ಕೆ ಬೀದರ್‌ನಿಂದ ನಿರ್ಗಮಿಸಿ, ಬೋಂತಿ ತಾಂಡಾಕ್ಕೆ ತೆರಳಿ ವಾಸ್ತವ್ಯ ಮಾಡಲಿದ್ದಾರೆ ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಗಸ್ಟ್ 16, 17 ರಂದು ಕುಂದು ಕೊರತೆ ಸಭೆ

ADVERTISEMENT

ಬೀದರ್‌: ಜೆಸ್ಕಾಂ ಹುಮನಾಬಾದ್ ವಿಭಾಗೀಯ ಕಚೇರಿ ವ್ಯಾಪ್ತಿಯ ಬಸವಕಲ್ಯಾಣ, ಹುಮನಾಬಾದ್ ಹಾಗೂ ಮನ್ನಾಎಖ್ಖೆಳ್ಳಿ ಉಪ ವಿಭಾಗದ ಕಚೇರಿಗಳಲ್ಲಿ ಗ್ರಾಹಕರ ಕುಂದು-ಕೊರತೆ ನಿವಾರಣಾ ಸಭೆ ಏರ್ಪಡಿಸಲಾಗಿದೆ.
ಬಸವಕಲ್ಯಾಣದಲ್ಲಿ ಆಗಸ್ಟ್.16 ರಂದು ಬೆಳಿಗ್ಗೆ 11 ಗಂಟೆಗೆ, ಹುಮನಾಬಾದ್‌ನಲ್ಲಿ 17 ರಂದು ಬೆಳಿಗ್ಗೆ 11 ಗಂಟೆಗೆ ಹಾಗೂ
ಮನ್ನಾಏಖ್ಖೆಳ್ಳಿ ಉಪ-ವಿಭಾಗ ಕಚೇರಿಯಲ್ಲಿ 17 ರಂದು ಮಧ್ಯಾಹ್ನ 3 ಗಂಟೆಗೆ ಸಭೆ ನಡೆಯಲಿದೆ ಎಂದು ಜೆಸ್ಕಾಂ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.