ADVERTISEMENT

ವಿಜಯ ದಶಮಿ ಅಂಗವಾಗಿ ಸಸ್ಯಾರೋಪಣ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2021, 13:00 IST
Last Updated 17 ಅಕ್ಟೋಬರ್ 2021, 13:00 IST
ಬೀದರ್‌ನಲ್ಲಿ ವಿಜಯ ದಶಮಿ ಅಂಗವಾಗಿ ಆಯೋಜಿಸಿದ್ದ ಸಸಿ ನೆಡುವ ಕಾರ್ಯಕ್ರಮದಲ್ಲಿ ಸಾಹಿತಿ ಶಿವಕುಮಾರ ಕಟ್ಟೆ ಮಾತನಾಡಿದರು. ವೀರಭದ್ರ ಉಪ್ಪಿನ, ಚಂದ್ರಕಲಾ ಮಲಶೆಟ್ಟಿ, ದೇವೇಂದ್ರ ಕಮಲ, ಪ್ರೊ.ಎಸ್.ವಿ.ಕಲ್ಮಠ ಇದ್ದಾರೆ
ಬೀದರ್‌ನಲ್ಲಿ ವಿಜಯ ದಶಮಿ ಅಂಗವಾಗಿ ಆಯೋಜಿಸಿದ್ದ ಸಸಿ ನೆಡುವ ಕಾರ್ಯಕ್ರಮದಲ್ಲಿ ಸಾಹಿತಿ ಶಿವಕುಮಾರ ಕಟ್ಟೆ ಮಾತನಾಡಿದರು. ವೀರಭದ್ರ ಉಪ್ಪಿನ, ಚಂದ್ರಕಲಾ ಮಲಶೆಟ್ಟಿ, ದೇವೇಂದ್ರ ಕಮಲ, ಪ್ರೊ.ಎಸ್.ವಿ.ಕಲ್ಮಠ ಇದ್ದಾರೆ   

ಬೀದರ್‌: ಗಾನಯೋಗಿ ಪಂಚಾಕ್ಷರ ಗವಾಯಿ ಸೇವಾ ಸಂಘ ಹಾಗೂ ಪರಿಸರ ಜಾಗೃತಿ ಪ್ರಚಾರಾಂದೋಲನ ವೇದಿಕೆ ವತಿಯಿಂದ ನಗರದ ವಿವೇಕಾನಂದ ಕಾಲೊನಿಯಲ್ಲಿ ವಿಜಯ ದಶಮಿ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಾಹಿತಿ ಶಿವಕುಮಾರ ಕಟ್ಟೆ, ‘ಪರಿಸರ ಸಮೃದ್ಧವಾಗಿದ್ದರೆ ಜೀವ ಸಂಕುಲ ಸ್ವಚ್ಚಂದವಾಗಿರಲು ಸಾಧ್ಯವಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರು ಸಸಿ ನೆಟ್ಟು ಬೆಳೆಸಬೇಕು’ ಎಂದು ಹೇಳಿದರು.

ನೀಲಾಂಬಿಕಾ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಚಂದ್ರಕಲಾ ಮಲಶೆಟ್ಟಿ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಪ್ರೊ.ದೇವೇಂದ್ರ ಕಮಲ ಅಧ್ಯಕ್ಷತೆ ವಹಿಸಿದ್ದರು.

ADVERTISEMENT

ಪ್ರೊ.ಎಸ್.ವಿ.ಕಲ್ಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ಧರ್ಮವೀರ ಬಿರಾದಾರ ಸ್ವಾಗತಿಸಿದರು. ವೀರಭದ್ರಪ್ಪ ಉಪ್ಪಿನ ನಿರೂಪಿಸಿದರು ಸಂಜೀವಕುಮಾರ ಸ್ವಾಮಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.