ADVERTISEMENT

ತೆಲಂಗಾಣದಲ್ಲಿ ಅಪಘಾತ: ಬೀದರ್‌ನ ಇಬ್ಬರು ಸಾವು

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2023, 16:00 IST
Last Updated 18 ಆಗಸ್ಟ್ 2023, 16:00 IST
ಸಾವು (ಪ್ರಾತಿನಿಧಿಕ ಚಿತ್ರ)
ಸಾವು (ಪ್ರಾತಿನಿಧಿಕ ಚಿತ್ರ)   

ಔರಾದ್/ ಬೀದರ್: ತೆಲಂಗಾಣ ರಾಜ್ಯದ ಜಹಿರಾಬಾದ್ ಬಳಿ ಶುಕ್ರವಾರ ನಡೆದ ರಸ್ತೆ ಅಪಘಾತದಲ್ಲಿ ಬೀದರ್ ಜಿಲ್ಲೆಯ ಇಬ್ಬರು ಯುವಕರು ಮೃತಪಟ್ಟಿದ್ದಾರೆ.

ಔರಾದ್ ತಾಲ್ಲೂಕಿನ ನಾಗಮಾರಪಳ್ಳಿಯ ಅವಿರಾಜ ಚಂದ್ರಕಾಂತ ಘೋಡೆ (26) ಹಾಗೂ ಬೀದರ್‌ನ ಗುಂಪಾ ನಿವಾಸಿ ವೀರೇಶ (32) ಮೃತರು.

ಈ ಇಬ್ಬರು ಗೆಳೆಯರು ಬೆಳಿಗ್ಗೆ ಹೈದರಾಬಾದ್‌ಗೆ ಕಾರಿನಲ್ಲಿ ತೆರಳುತ್ತಿದ್ದಾಗ ಎದುರಿನಿಂದ ಬಂದ ಲಾರಿಗೆ ಕಾರು ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ADVERTISEMENT

ಜಹಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.