ಬೀದರ್: ನಗರದ ಗುರುನಾನಕ ದೇವ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡಲಾಯಿತು.
ಜಿಲ್ಲಾ ಆಡಳಿತ ಮತ್ತು ಜಿ.ಎನ್.ಡಿ ಎಂಜಿನಿಯರಿಂಗ್ ಕಾಲೇಜಿನ ಯುತ್ ರೆಡ್ಕ್ರಾಸ್ ವಿಂಗ್ ಸಹಯೋಗದಲ್ಲಿ ನಡೆದ ಲಸಿಕಾಕರಣ ಕಾರ್ಯಕ್ರಮಕ್ಕೆ ಯುತ್ ರೆಡ್ಕ್ರಾಸ್ ವಿಂಗ್ ಅಧ್ಯಕ್ಷ ಪ್ರೊ.ಸುರೇಶ ಚಿಮಕೋಡೆ ಚಾಲನೆ ನೀಡಿದರು.
ಕೊರೊನಾ ಸೋಂಕು ಎದುರಿಸಲು ಲಸಿಕೆಯೊಂದೇ ಪರಿಣಾಮಕಾರಿ ಅಸ್ತ್ರವಾಗಿರುವುದನ್ನು ವಿದ್ಯಾರ್ಥಿಗಳು ಹಾಗೂ ಪಾಲಕರಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಪ್ರಾಚಾರ್ಯ ಡಾ.ರವೀಂದ್ರ ಎಕಲಾರಕರ್ ತಿಳಿಸಿದರು.
ಲಸಿಕೆ ಪಡೆಯದ ವಿದ್ಯಾರ್ಥಿಗಳನ್ನು ಕಾಲೇಜಿಗೆ ಕರೆಸಿ ಲಸಿಕೆ ಕೊಡಿಸಲಾಗಿದೆ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.