ADVERTISEMENT

ವಚನ ವಿಜಯೋತ್ಸವ: ಭಿತ್ತಿಚಿತ್ರ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 22 ಜನವರಿ 2019, 14:02 IST
Last Updated 22 ಜನವರಿ 2019, 14:02 IST
ಬೀದರ್‌ನ ಶರಣ ಉದ್ಯಾನದಲ್ಲಿ ಭಾನುವಾರ ಲಿಂಗಾಯತ ಮಹಾಮಠದ ಅಕ್ಕ ಅನ್ನಪೂರ್ಣ ಹಾಗೂ ಗಂಗಾಂಬಿಕಾ ಅಕ್ಕ ಅವರು ವಚನ ವಿಜಯೋತ್ಸವದ ಭಿತ್ತಿಚಿತ್ರವನ್ನು ಬಿಡುಗಡೆ ಮಾಡಿದರು
ಬೀದರ್‌ನ ಶರಣ ಉದ್ಯಾನದಲ್ಲಿ ಭಾನುವಾರ ಲಿಂಗಾಯತ ಮಹಾಮಠದ ಅಕ್ಕ ಅನ್ನಪೂರ್ಣ ಹಾಗೂ ಗಂಗಾಂಬಿಕಾ ಅಕ್ಕ ಅವರು ವಚನ ವಿಜಯೋತ್ಸವದ ಭಿತ್ತಿಚಿತ್ರವನ್ನು ಬಿಡುಗಡೆ ಮಾಡಿದರು   

ಬೀದರ್: ವಚನ ವಿಜಯೋತ್ಸವದ ಭಿತ್ತಿಚಿತ್ರ ಬಿಡುಗಡೆ ಕಾರ್ಯಕ್ರಮ ಲಿಂಗಾಯತ ಮಹಾಮಠದ ಅಕ್ಕ ಅನ್ನಪೂರ್ಣ ಸಾನ್ನಿಧ್ಯ ಹಾಗೂ ಅಕ್ಕ ಗಂಗಾಂಬಿಕಾ ಅವರ ನೇತೃತ್ವದಲ್ಲಿ ನಡೆಯಿತು.

ಅಕ್ಕ ಅನ್ನಪೂರ್ಣ ಮಾತನಾಡಿ, ‘ಫೆಬ್ರುವರಿ 17 ರಿಂದ ಮೂರು ದಿನಗಳ ಕಾಲ ನಡೆಯಲಿರುವ ವಚನ ವಿಜಯೋತ್ಸವದ ಪ್ರಚಾರದ ಅಂಗವಾಗಿ ಭಿತ್ತಿಚಿತ್ರ ಹಾಗೂ ಕರಪತ್ರ ಬಿಡುಗಡೆ ಮಾಡಲಾಗಿದೆ’ ಎಂದು ತಿಳಿಸಿದರು.

ಚನ್ನಬಸವಾನಂದ ಸ್ವಾಮೀಜಿ, ಹಿರೇಹೊನ್ನಾಳ್ಳಿ, ವಚನ ವಿಜಯೋತ್ಸವದ ಸ್ವಾಗತ ಸಮಿತಿ ಅಧ್ಯಕ್ಷ ಚಂದ್ರಶೇಖರ ಹೆಬ್ಬಾಳೆ, ಹಣಕಾಸು ಸಮಿತಿ ಅಧ್ಯಕ್ಷ ಸಿ.ಎಸ್.ಪಾಟೀಲ, ಮಾಣಿಕಪ್ಪ ಗೋರನಾಳೆ, ರಾಜಕುಮಾರ ಪಾಟೀಲ, ಅನಿಲಕುಮಾರ ದೇಶಮುಖ, ಡಾ. ವಿಜಯಶ್ರೀ ಬಶೆಟ್ಟಿ ಹಾಗೂ ನೀಲಮ್ಮ ರೋಗನ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.