ADVERTISEMENT

ಹುಮನಾಬಾದ್ |ದುಷ್ಟರ ಸಂಹಾರಕ ವೀರಭದ್ರ

​ಪ್ರಜಾವಾಣಿ ವಾರ್ತೆ
Published 26 ಜನವರಿ 2026, 6:59 IST
Last Updated 26 ಜನವರಿ 2026, 6:59 IST
ವೀರಭದ್ರೇಶ್ವರ ಮೂರ್ತಿ
ವೀರಭದ್ರೇಶ್ವರ ಮೂರ್ತಿ   

ಹುಮನಾಬಾದ್: ಪಟ್ಟಣದ ವೀರಭದ್ರೇಶ್ವರ ದೇವಸ್ಥಾನವು ಸಾವಿರಾರು ವರ್ಷಗಳ ಐತಿಹಾಸಿಕ ದೇವಸ್ಥಾನವಾಗಿದೆ. ದುಷ್ಟರ ಸಂಹಾರಕ, ಶಿಷ್ಟರ ಪರಿಪಾಲಕನಾದ ವೀರಭದ್ರೇಶ್ವರ ದೇವರು ನೆಲೆ ನಿಂತು ಈ ಸ್ಥಳ ಪಾವನ ಪುಣ್ಯಕ್ಷೇತ್ರವಾಗಿ ರೂಪಗೊಂಡಿದೆ. ರಾಜ್ಯದ ವಿವಿಧ ಜಿಲ್ಲೆಗಳು ಸೇರಿದಂತೆ ಹೊರರಾಜ್ಯಗಳ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ.

ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ ಹಾಗೂ ತಮಿಳುನಾಡಿನ ವೀರಶೈವ ಲಿಂಗಾಯತ ಸಮುದಾಯದ ಬಹುಪಾಲು ಜನ ವೀರಭದ್ರೇಶ್ವರ ದೇವರನ್ನು ನೆನೆಯುತ್ತಾರೆ. ಹುಮನಾಬಾದ್ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ನಡೆಯುತ್ತದೆ.

ಆದರೆ ಇಲ್ಲಿನ ಜನರಿಗೆ ವೀರಭದ್ರೇಶ್ವರ ಜಾತ್ರೆ ಎಂದರೆ ಎಲ್ಲರಿಗೂ ನೆನಪಾಗುವುದು ಹುಮನಾಬಾದ್ ಪಟ್ಟಣ ಮಾತ್ರ. ವಿಜಯನಗರ ಅರಸರ ಕಾಲದಲ್ಲೂ ಸಹ ವೀರಭದ್ರೇಶ್ವರರ ಯುದ್ಧದ ಆದಿ ದೇವತೆಯನ್ನಾಗಿ ಪೂಜಿಸಲಾಗುತ್ತಿತ್ತು ಎಂಬುದಕ್ಕೆ ಇತಿಹಾಸದ ಉಲ್ಲೇಖವಿದೆ. ಈಗಲೂ ಹಂಪಿಯಲ್ಲಿ ಉದ್ಧನ ವೀರಭದ್ರ ಎಂಬ ಪ್ರಸಿದ್ಧ ದೇವಾಲಯವಿದೆ.

ADVERTISEMENT

ಅನಾದಿಕಾಲದಿಂದಲೂ ವೀರಭದ್ರ ಕೋಟಿ ಕೋಟಿ ಭಕ್ತರ ಪಾಲಿಗೆ ಆರಾಧ್ಯ ದೇವನಾಗಿ ಭಕ್ತರ ಇಷ್ಟಾರ್ಥ ನೆರವೇರಿಸುವ ಕಲ್ಪವೃಕ್ಷನಾಗಿದ್ದಾನೆ. 108 ಮಠಗಳ ಐತಿಹಾಸಿಕ ಹಿನ್ನಲೆಯನ್ನು ಹೊಂದಿರುವ ಅಂದಿನ ಜಯಸಿಂಹ ನಗರವೇ ಇಂದಿನ ಹುಮನಾಬಾದ್ ಪಟ್ಟಣ. ರಾಜ್ಯದಲ್ಲಿಯೇ 108 ಮಠ ಹೊಂದಿದ ಏಕೈಕ ಪಟ್ಟಣ ಎಂದು ಅನೇಕ ಇತಿಹಾಸಕಾರರು ಹೇಳುತ್ತಾರೆ.

ವೀರಭದ್ರೇಶ್ವರ ಮೂರ್ತಿ
ಹಿರೇಮಠ ಸಂಸ್ಥಾನದ ರೇಣುಕ ವೀರಗಂಗಾಧರ ಶಿವಾಚಾರ್ಯ
ವೀರಭದ್ರೇಶ್ವರ ಮೂರ್ತಿ