ADVERTISEMENT

ಮೃತ ರೈತನ ಮನೆಗೆ ಬೆಲ್ದಾಳೆ ಭೇಟಿ

​ಪ್ರಜಾವಾಣಿ ವಾರ್ತೆ
Published 14 ಜೂನ್ 2021, 16:58 IST
Last Updated 14 ಜೂನ್ 2021, 16:58 IST
ಸಿಡಿಲಿನಿಂದ ಮೃತಪಟ್ಟ ಬೀದರ್ ತಾಲ್ಲೂಕಿನ ಕಾಶೆಂಪೂರ್(ಪಿ) ಗ್ರಾಮದ ರೈತ ಚಿದಾನಂದ ವಗ್ಗಿ ಅವರ ಮನೆಗೆ ಭೇಟಿ ನೀಡಿದ ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ ಅವರು ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು
ಸಿಡಿಲಿನಿಂದ ಮೃತಪಟ್ಟ ಬೀದರ್ ತಾಲ್ಲೂಕಿನ ಕಾಶೆಂಪೂರ್(ಪಿ) ಗ್ರಾಮದ ರೈತ ಚಿದಾನಂದ ವಗ್ಗಿ ಅವರ ಮನೆಗೆ ಭೇಟಿ ನೀಡಿದ ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ ಅವರು ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು   

ಬೀದರ್: ಬೀದರ್ ತಾಲ್ಲೂಕಿನ ಕಾಶೆಂಪೂರ್ (ಪಿ) ಗ್ರಾಮದಲ್ಲಿ ಸಿಡಿಲಿನಿಂದ ಮೃತಪಟ್ಟ ರೈತ ಚಿದಾನಂದ ವಗ್ಗಿ ಅವರ ಮನೆಗೆ ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ ಭೇಟಿ ನೀಡಿದರು.

ರೈತನ ಕುಟುಂಬಕ್ಕೆ ಸರ್ಕಾರದ ಎಲ್ಲ ಸೌಕರ್ಯಗಳನ್ನು ದೊರಕಿಸಿಕೊಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗೆ ದೂರವಾಣಿ ಕರೆ ಮಾಡಿ ಸೂಚಿಸಿದರು.

ಬಿಜೆಪಿ ಬೀದರ್ ದಕ್ಷಿಣ ಘಟಕದ ಅಧ್ಯಕ್ಷ ರಾಜರೆಡ್ಡಿ ಶಹಾಬಾದ್, ಮುಖಂಡರಾದ ಸುರೇಶ ಮಾಶೆಟ್ಟಿ, ಕುಶಾಲರಾವ್ ಯಾಬಾ, ಜಗನ್ನಾಥ ಪಾಟೀಲ, ಚನ್ನಪ್ಪ ಗೌರಶೆಟ್ಟಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.