ADVERTISEMENT

ಏಕದಿನ ಕ್ರಿಕೆಟ್‌ ಪಂದ್ಯಕ್ಕೆ ಭದ್ರತೆ: ಭಾಸ್ಕರ್‌ ರಾವ್

​ಪ್ರಜಾವಾಣಿ ವಾರ್ತೆ
Published 16 ಜನವರಿ 2020, 20:26 IST
Last Updated 16 ಜನವರಿ 2020, 20:26 IST

ಬೆಂಗಳೂರು: ಮುಂಬೈಯಲ್ಲಿ ಭಾರತ– ಆಸ್ಟ್ರೇಲಿಯಾ ನಡುವೆ ನಡೆದ ಏಕದಿನ ಪಂದ್ಯದ ವೇಳೆ ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧ ಪ್ರತಿಭಟನೆ ವ್ಯಕ್ತವಾದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಭಾನುವಾರ ನಡೆಯಲಿರುವ ಪಂದ್ಯದ ಸಂದರ್ಭದಲ್ಲಿ ಹೆಚ್ಚಿನ ಭದ್ರತೆ ಒದಗಿಸುವಂತೆ ನಗರದ ಪೊಲೀಸ್‌ ಕಮಿಷನರ್‌ ಭಾಸ್ಕರ ರಾವ್ ಅವರಿಗೆ ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್‌ ಪತ್ರ ಬರೆದಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಭಾಸ್ಕರ ರಾವ್‌, ‘ಪಂದ್ಯದ ವೇಳೆ ಹೆಚ್ಚಿನ ಭದ್ರತೆ ಒದಗಿಸುವಂತೆ ಹಿರಿಯ ಪೊಲೀಸ್‌ ಅಧಿಕಾರಿಗಳಿಗೆ ಈಗಾಗಲೇ ಸೂಚಿಸಿದ್ದೇನೆ.ಕ್ರಿಕೆಟ್‌ ಅಭಿಮಾನಿಗಳನ್ನು ತಪಾಸಣೆಗೆ ಒಳಪಡಿಸಿ ಮೈದಾನದ ಒಳಗೆ ಬಿಡುವಂತೆ ತಿಳಿಸಿದ್ದೇನೆ’ ಎಂದರು.

‘ಕ್ರಿಕೆಟ್‌ ಅಭಿಮಾನಿಗಳು ಟಿಕೆಟ್‌ ತೆಗೆದುಕೊಂಡು ಪಂದ್ಯ ವೀಕ್ಷಿಸಲು ಬರುತ್ತಾರೆ. ಈ ವೇಳೆ, ಸಿಎಎ ವಿರೋಧಿಸಿ ಪ್ರತಿಭಟನೆ ನಡೆಸಿದರೆ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.