ADVERTISEMENT

ಬೀದರ್: ಕಾರಿಗೆ ಬೆಂಕಿ, ಮಹಿಳೆ ಸಜೀವ ದಹನ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2019, 11:24 IST
Last Updated 5 ಡಿಸೆಂಬರ್ 2019, 11:24 IST
ಚಿಟಗುಪ್ಪ ತಾಲ್ಲೂಕಿನ ಮನ್ನಾಎಖ್ಖೆಳ್ಳಿ ಸಮೀಪ ಕಾರು ಹೊತ್ತಿಕೊಂಡಿರುವುದು
ಚಿಟಗುಪ್ಪ ತಾಲ್ಲೂಕಿನ ಮನ್ನಾಎಖ್ಖೆಳ್ಳಿ ಸಮೀಪ ಕಾರು ಹೊತ್ತಿಕೊಂಡಿರುವುದು   

ಚಿಟಗುಪ್ಪ (ಬೀದರ್ ಜಿಲ್ಲೆ): ತಾಲ್ಲೂಕಿನ ಮನ್ನಾಎಖ್ಖೆಳ್ಳಿ ಹೊರವಲಯದಲ್ಲಿ ಗುರುವಾರ ಬೆಳಿಗ್ಗೆ ಮಹಾರಾಷ್ಟ್ರದಿಂದ ತೆಲಂಗಾಣಕ್ಕೆ ತೆರಳುತ್ತಿದ್ದ ಕಾರಿಗೆ ಬೆಂಕಿ ಹೊತ್ತಿಕೊಂಡು, ಕಾರಿನಲ್ಲಿದ್ದ ಮಹಿಳೆಯೊಬ್ಬರು ಸಜೀವ ದಹನಗೊಂಡಿದ್ದಾರೆ. ಮಹಿಳೆಯ ಪತಿ ಹಾಗೂ ಪುತ್ರ ಆಶ್ಚರ್ಯಕರ ರೀತಿಯಲ್ಲಿ ಪಾರಾಗಿದ್ದಾರೆ.

ಹೈದರಾಬಾದ್‌ನ ಕಲ್ಯಾಣಿ ಉದಯಕುಮಾರ(30) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಲ್ಯಾಣಿಯ ಪತಿ ಉದಯಕುಮಾರ ಹಾಗೂ ಪುತ್ರ ಗಗನಕುಮಾರ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಮಹಾರಾಷ್ಟ್ರದ ಲಾತೂರ್‌ ಜಿಲ್ಲೆಯ ಉದಗಿರನಲ್ಲಿರುವ ಖಾಸಗಿ ಆಸ್ಪತ್ರೆಗೆ ಹೋಗಿ ಹೈದರಾಬಾದ್‌ಗೆ ಮರಳುತ್ತಿದ್ದಾಗ ಅವಘಡ ಸಂಭವಿಸಿದೆ. ಮನ್ನಾಎಖ್ಖೆಳ್ಳಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.