ADVERTISEMENT

ಬಸವಕಲ್ಯಾಣ: ವಿಡಿಯೊ ಮಾಡಿಟ್ಟು ಆತ್ಮಹತ್ಯೆ ಮಾಡಿಕೊಂಡ ಮಹಿಳೆ

​ಪ್ರಜಾವಾಣಿ ವಾರ್ತೆ
Published 24 ಜೂನ್ 2020, 13:43 IST
Last Updated 24 ಜೂನ್ 2020, 13:43 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬಸವಕಲ್ಯಾಣ: ಇಲ್ಲಿನ ಹಿರೇಮಠ ಓಣಿಯ ತ್ರಿಶೂಲಾ ಮಾರುತಿ ಕಟ್ಟಿಮನಿ (35) ಎಂಬುವವರು ಮೊಬೈಲ್‌ನಲ್ಲಿ ವಿಡಿಯೊ ಮಾಡಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೂಲತಃ ಕಲಬುರ್ಗಿ ಜಿಲ್ಲೆಯ ಆಳಂದ ತಾಲ್ಲೂಕಿನವರಾದ ಅವರು ಪತಿ ಹಾಗೂ ಮಕ್ಕಳೊಂದಿಗೆ ಇಲ್ಲಿ ವಾಸವಿದ್ದರು.

ಸಾವಿಗೆ ಮುಂಚೆ ತಮ್ಮ ಮೊಬೈಲ್‌ನಲ್ಲಿ ವಿಡಿಯೊ ಮಾಡಿದ್ದಾರೆ. ‘ನನ್ನ ಸಾವಿಗೆ ನಾನೇ ಕಾರಣ. ಸರಿಯೋ ತಪ್ಪೋ ಗೊತ್ತಿಲ್ಲ. ನನ್ನನ್ನು ಕ್ಷಮಿಸಿಬಿಡಿ’ ಎಂದು ಹೇಳಿದ್ದಾರೆ. ಮೊಬೈಲ್‌ನಲ್ಲಿ ವಿಡಿಯೊ ಇದೆ ಎಂದು ಹಾಳೆ ಮೇಲೆ ಬರೆದು ಎಲ್ಲರಿಗೂ ಕಾಣುವಂತೆ ಇಟ್ಟಿದ್ದಾರೆ ಎಂದು ತಿಳಿದುಬಂದಿದೆ.

ADVERTISEMENT

ಈ ಸಂಬಂಧ ಪಟ್ಟಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.