
ಬೀದರ್ನ ಹೇಮರೆಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಮಹಿಳಾ ಸ್ವಸಹಾಯ ಸಂಘದ ದಶಮಾನೋತ್ಸವ ಹಾಗೂ ಜಿಲ್ಲಾ ರೆಡ್ಡಿ ಮಹಿಳಾ ಜಾಗೃತಿ ಸಮಾವೇಶ ನಡೆಯಿತು.
ಬೀದರ್: ‘ಮಹಿಳೆಯರು ಸ್ವಾವಲಂಬಿಗಳಾಗಲು ಯತ್ನಿಸಬೇಕು’ ಎಂದು ಕಲಬುರಗಿ ವಿಶಾಲಾಕ್ಷಿ ವಿ. ಕರಡ್ಡಿ ಕಿವಿಮಾತು ಹೇಳಿದರು.
ನಗರದ ಅಮಲಾಪುರ ರಸ್ತೆಯಲ್ಲಿಯ ಹೇಮರೆಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಮಹಿಳಾ ಸ್ವಸಹಾಯ ಸಂಘದ ದಶಮಾನೋತ್ಸವ ಹಾಗೂ ಜಿಲ್ಲಾ ರೆಡ್ಡಿ ಮಹಿಳಾ ಜಾಗೃತಿ ಸಮಾವೇಶದಲ್ಲಿ ಅವರು ಮಾತನಾಡಿ, ‘ಹೆಣ್ಣು ಮಕ್ಕಳು ಸಂಘಟಿತರಾಗಬೇಕು. ಪರಸ್ಪರರ ಬೆಳವಣಿಗೆಗೆ ಸಹಕರಿಸಬೇಕು’ ಎಂದು ತಿಳಿಸಿದರು.
ನಿವೃತ್ತ ಪ್ರಾಚಾರ್ಯ ಶಿವಶರಣಪ್ಪ ಹುಗ್ಗಿ ಪಾಟೀಲ ಅವರು, ಹೇಮರೆಡ್ಡಿ ಮಲ್ಲಮ್ಮ ಅವರ ಜೀವನ ಮತ್ತು ಸಾಧನೆ ಮೇಲೆ ಬೆಳಕು ಚೆಲ್ಲಿದರು. ಡಾ.ಜ್ಯೋತಿ ರೆಡ್ಡಿ, ಡಾ.ಮಲ್ಲಪ್ಪ ಬೋತಗಿ, ಜಿಲ್ಲಾ ರೆಡ್ಡಿ ಸಮಾಜದ ಅಧ್ಯಕ್ಷ ಶಂಕರ ರೆಡ್ಡಿ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ರೆಡ್ಡಿ ಬ್ಯಾಂಕ್ ಅಧ್ಯಕ್ಷ ಸಂಗ್ರಾಮ ರೆಡ್ಡಿ ಹುಣಸಗೇರಿ, ಡಾ.ಆನಂದ ರೆಡ್ಡಿ ಮಾತನಾಡಿದರು. ಸಂಘದ ಅಧ್ಯಕ್ಷೆ ಸಂಗೀತಾ ರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಸದಸ್ಯ ರಾಜು ಚಿಂತಾಮಣಿ, ರೆಡ್ಡಿ ಸಮಾಜದ ಭೀಮ ರೆಡ್ಡಿ ಸಿಂಧನಕೇರಾ, ಪ್ರಶಾಂತ ಜವಳೆ, ರಾಜ ರೆಡ್ಡಿ, ಅಪ್ಪಾ ರೆಡ್ಡಿ, ರಾಮ ರೆಡ್ಡಿ, ಶರಣಪ್ಪ ತಿರ್ಲಾಪುರ ಹಾಗೂ ರೆಡ್ಡಿ ಸಮಾಜದ ಸಾಧಕರ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಸಂಘದ ಉಪಾಧ್ಯಕ್ಷೆ ಬಬಿತಾ ರೆಡ್ಡಿ ಹಾಜರಿದ್ದರು. ಶಿಲ್ಪಾ ರೆಡ್ಡಿ ಬೋಗಲೆ ಸ್ವಾಗತಿಸಿದರು. ಉಮಾ ರೆಡ್ಡಿ, ಅನುರಾಧಾ ರೆಡ್ಡಿ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.