ADVERTISEMENT

‘ಸೌಲಭ್ಯಗಳು ಅರ್ಹರನ್ನು ತಲುಪಲಿ’

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2019, 8:56 IST
Last Updated 4 ಡಿಸೆಂಬರ್ 2019, 8:56 IST
ಕಮಲನಗರ ತಾಲ್ಲೂಕಿನ ಶಿವಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ವಿಶ್ವ ಅಂಗವಿಕಲರ ದಿನಾಚರಣೆ ಆಚರಿಸಲಾಯಿತು
ಕಮಲನಗರ ತಾಲ್ಲೂಕಿನ ಶಿವಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ವಿಶ್ವ ಅಂಗವಿಕಲರ ದಿನಾಚರಣೆ ಆಚರಿಸಲಾಯಿತು   

ಕಮಲನಗರ: ‘ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯಗಳು ತಲುಪಬೇಕು’ ಎಂದು ಶಿಕ್ಷಕ ಆಕಾಶ ಜಾಧವ ಹೇಳಿದರು.

ತಾಲ್ಲೂಕಿನ ಶಿವಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಆಯೋಜಿಸಿದ್ದ ವಿಶ್ವ ಅಂಗವಿಕಲರ ದಿನಾಚರಣೆ ಕಾಯಕ್ರಮದಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಸಾವಿರಾರು ಮಂದಿ ಅಂಗವಿಕಲರು ಇದ್ದಾರೆ. ಮೂರು ಅಥವಾ ಆರು ತಿಂಗಳಿಗೊಮ್ಮೆ ಇಲಾಖೆ ಅಧಿಕಾರಿಗಳು ಅವರ ಬಳಿ ತೆರಳಿ ಸರ್ಕಾರದ ಸೌಲಭ್ಯಗಳು ತಲುಪುತ್ತಿದೆಯೇ ಎಂದು ಮೇಲ್ವಿಚಾರಣೆ ನಡೆಸಬೇಕು. ಆ ಮೂಲಕ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯ ದೊರಕುವಂತೆ ಮಾಡಬೇಕು ಎಂದರು.

ADVERTISEMENT

ಶಿಕ್ಷಕಿ ಶಾಂತಾಬಾಯಿ ಗಾಯಕವಾಡ, ವನಮಾಲಾ, ಚಂಪಾಬಾಯಿ ಬಿರಾದಾರ, ಉತ್ತಮಬಾಯಿ ವಿಲಾಸಪುರೆ ಹಾಗೂ ಶಾಲೆಯ ಮಕ್ಕಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.