ADVERTISEMENT

ಯಾದಗಿರಿ: ವಿದ್ಯುತ್ ಹರಿದು ಲೈನ್ ಮನ್ ಸಾವು

​ಪ್ರಜಾವಾಣಿ ವಾರ್ತೆ
Published 6 ಜನವರಿ 2021, 8:09 IST
Last Updated 6 ಜನವರಿ 2021, 8:09 IST

ಯರಗೋಳ (ಯಾದಗಿರಿ ಜಿಲ್ಲೆ): ಸಮೀಪದ ಅರಿಕೇರಾ (ಬಿ) ಗ್ರಾಮದ ಹೊರ ವಲಯದಲ್ಲಿ ನೂತನ ವಿದ್ಯುತ್ ಪರಿವರ್ತಕ ಅಳವಡಿಸುವ ವೇಳೆ ಏಕಾಏಕಿ ವಿದ್ಯುತ್ ಹರಿದು ಲೈನ್ ಮನ್ ಸಾವನ್ನಪ್ಪಿದ್ದಾರೆ.

ಠಾಣಗುಂದಿ ಜೆಸ್ಕಾಂ ಸ್ಟೇಷನಲ್ಲಿ ಗುತ್ತಿಗೆ ಆಧಾರದ ಮೇಲೆ ಲೈನ್ ಮನ್ ಆಗಿ ಕೆಲಸಮಾಡುತ್ತಿದ್ದ ಬಸಪ್ಪ (30) ಸಾವನ್ನಪ್ಪಿದವರು.

ಮರಿಲಿಂಗಪ್ಪ ಎನ್ನುವ ಲೈನ್ ಮನ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಯಾದಗಿರಿಗೆ ಕೊಂಡೊಯ್ಯಲಾಗಿದೆ
ಎಂದು ಸ್ಥಳೀಯರು ತಿಳಿಸಿದ್ದಾರೆ.

ADVERTISEMENT

ದುರಸ್ತಿ ಮಾಡುವ ವೇಳೆ ಘಟನೆ ಸಂಭವಿಸಿದೆ. ವಿದ್ಯುತ್ ತಗುಲಿ ಬಸಪ್ಪ ದೇಹ ಕಂಬದಲ್ಲಿ ನೇತಾಡುತ್ತಿತ್ತು.

ಸ್ಥಳಕ್ಕೆ ಯಾದಗಿರಿ ಜೆಸ್ಕಾಂ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಶಿವಪ್ಪ ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.