ಹುಮನಾಬಾದ್: ‘ಶಿಕ್ಷಕ, ಶಿಕ್ಷಕಿಯರು ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸಬೇಕು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಚಪ್ಪ ವಾಲಿ ತಿಳಿದರು.
ಪಟ್ಟಣದ ವಿಶ್ವೇಶ್ವರಯ್ಯ ಶಿಕ್ಷಣ ಸಂಸ್ಥೆಯ ವಿಶ್ವೇಶ್ವರಯ್ಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈಚೆಗೆ ನಡೆದ ‘ಯೋಜನಾ ದಿನಾಚರಣೆ ಮತ್ತು ಶೈಕ್ಷಣಿಕ ವಸ್ತು ಪ್ರದರ್ಶನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಆಧುನಿಕ ಯುಗದಲ್ಲಿ ಶಿಕ್ಷಕರು ಮಕ್ಕಳಿಗೆ ಹೊಸ, ಹೊಸ ವಿಷಯಗಳನ್ನು ತಿಳಿಸಿಕೊಡಬೇಕು. ವೈಜ್ಞಾನಿಕ ಮನೋಭಾವ ಮೂಡಿಸಬೇಕು’ ಎಂದರು.
ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಗೋವಿಂದ, ಸಂಸ್ಥೆ ಅಧ್ಯಕ್ಷ ರಾಜಕುಮಾರ ಕೆ.ಭೂರೇಶ ಮಾತನಾಡಿದರು.
ಶಾಲೆಯ ಮುಖ್ಯಶಿಕ್ಷಕ ಡ್ಯಾನಿಯಲ್ ಕೆ.ಭೂರೇಶ, ವಿಶ್ವಭಾರತಿ ಕನ್ನಡ ಮಾದ್ಯಮ ಶಾಲೆಯ ಮುಖ್ಯಶಿಕ್ಷಕಿ ವನಜಾಕ್ಷಿ, ಸಂಪತಿ, ಗೀತಾ, ಕಾವೇರಿ, ಸವಿತಾ, ನಿರ್ಮಲಾ, ಪೂಜಾ, ದೀಪಿಕಾ, ಸಿದ್ಧಾರ್ಥ ಹಾಗೂ ಸಂಗಮೇಶ ಇದ್ದರು.
ಆರತಿ ನಿರೂಪಿಸಿದರು. ಹೀನಾ ಅಂಜುಮ್ ಸ್ವಾಗತಿಸಿದರು. ರಂಜನಾ ವಂದಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.