ಹುಮನಾಬಾದ್: ಪಟ್ಟಣದ ವಾಂಜ್ರಿ ಬಡಾವಣೆಯ ಯುವಕನೊಬ್ಬ ಮಂಗಳವಾರ ಇಲ್ಲಿನ ರಾಜರಾಜೇಶ್ವರಿ ದೇವಸ್ಥಾನದ ಹಿಂಭಾಗದಲ್ಲಿರುವ ವಿದ್ಯುತ್ ಕಂಬಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ನಾಗೇಶ ರೆಡ್ಡಿ ಭೀಮರೆಡ್ಡಿ ಕನಕಟಕರ್ (23) ಆತ್ಮಹತ್ಯೆ ಮಾಡಿಕೊಂಡ ಯುವಕ. ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಸಿಪಿಐ ಮಲ್ಲಿಕಾರ್ಜುನ ಯಾತನೂರ, ಪಿಎಸ್ಐ ಮಹಾಂತೇಶ ಲುಂಬಿ, ಅಪರಾಧ ವಿಭಾಗದ ಪಿಎಸ್ಐ ಕಿರಣಕುಮಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಈ ಸಂಬಂಧ ಹುಮನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.