ADVERTISEMENT

ಅಭಿವೃದ್ಧಿಗೆ ರೂ.1 ಕೋಟಿ: ಪುಟ್ಟರಂಗಶೆಟ್ಟಿ

​ಪ್ರಜಾವಾಣಿ ವಾರ್ತೆ
Published 21 ಜೂನ್ 2011, 8:55 IST
Last Updated 21 ಜೂನ್ 2011, 8:55 IST

ಚಾಮರಾಜನಗರ: ನಂಜನಗೂಡು- ಬಿಳಿಗಿರಿರಂಗನ ಬೆಟ್ಟದ ರಸ್ತೆಯ ಆಯ್ದಭಾಗದ ದುರಸ್ತಿಗೆ 1.30 ಕೋಟಿ ರೂ ಮಂಜೂರಾಗಿದ್ದು, ಶಾಸಕ ಸಿ. ಪುಟ್ಟರಂಗಶೆಟ್ಟಿ ಸೋಮವಾರ ಗುದ್ದಲಿಪೂಜೆ ನೆರವೇರಿಸಿದರು.

ತಾಲ್ಲೂಕಿನ ಕೆ. ಗುಡಿಯ ಕುಂಟಗುಡಿ ದೇವಸ್ಥಾನದ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ನಂತರ ಮಾತನಾಡಿದ ಅವರು, ಚಾ.ನಗರದಿಂದ ಕೆ.ಗುಡಿ ಮಾರ್ಗವಾಗಿ ಬಿಳಿಗಿರಿರಂಗನ ಬೆಟ್ಟಕ್ಕೆ ಹೋಗುವ ರಸ್ತೆ ತೀವ್ರ ಹದಗೆಟ್ಟಿದೆ. ಇದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಈ ಹಿನ್ನೆಲೆಯಲ್ಲಿ ಅಭಿವೃದ್ಧಿಗೆ ಚಾಲನೆ ನೀಡಲಾಗಿದೆ ಎಂದರು.

ರಸ್ತೆ ಅಭಿವೃದ್ಧಿ ಯೋಜನೆಯಡಿ 1.30 ಕೋಟಿ ರೂ ಮಂಜೂರಾಗಿದೆ. ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು. ಕಾಮಗಾರಿಯ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ತಾ.ಪಂ. ಸದಸ್ಯರಾದ ನಾಗಬಸವಣ್ಣ, ಮಹದೇವಮ್ಮ, ಗ್ರಾ.ಪಂ. ಅಧ್ಯಕ್ಷೆ ಕುಮಾರಿಬಾಯಿ, ಉಪಾಧ್ಯಕ್ಷ ಶಾಂತಮ್ಮ, ಸದಸ್ಯರಾದ ಮೂರ್ತಿ, ಉಲ್ಲಾಸ್ ನಾಯಕ್, ಸಿದ್ದರಾಜು, ಜಡೆಯಪ್ಪ, ಮಹದೇವಗೌಡ, ಮುಖಂಡರಾದ ಕುಮಾರ್‌ನಾಯಕ್, ನಾಗಯ್ಯ, ಪಟೇಲ್‌ಕುಮಾರ್, ವೀರಭದ್ರಸ್ವಾಮಿ ಇತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.