ಗುಂಡ್ಲುಪೇಟೆ: ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಗ್ರಾಮ ಕಲ್ಯಾಣ ಕಾರ್ಯಕ್ರಮದಡಿ ಕಟ್ಟಡ ನಿರ್ಮಾಣಕ್ಕೆ ಅನುದಾನದ ಚೆಕ್ ವಿತರಿಸಲಾಯಿತು.
ತಾಲ್ಲೂಕಿನ ಹುತ್ತೂರು ಗ್ರಾಮದಲ್ಲಿ ಈಚೆಗೆ ನಡೆದ ಕಾರ್ಯಕ್ರಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಡಿ ತಾಲ್ಲೂಕಿನ 13 ಹಾಲು ಉತ್ಪಾದಕರ ಸಹಕಾರಿ ಸಂಘಗಳಿಗೆ ₨ 6,10,000 ಅನುದಾನ ಮಂಜೂರಾಗಿದ್ದು, ಹುತ್ತೂರು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ₨40,000 ಅನುದಾನ ಚೆಕ್ಅನ್ನು ಯೋಜನಾಧಿಕಾರಿ ಚೆನ್ನಕೇಶವ ಅವರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಮಹದೇವಪ್ಪ ಅವರಿಗೆ ವಿತರಿಸಿದರು.
ನಿರ್ದೇಶಕರಾದ ಮಾದೇಶ್, ಬಸವಣ್ಣ, ಸಿದ್ದಯ್ಯ, ಶಿವಕುಮಾರ್, ಮಾದಪ್ಪ, ಬೆಳ್ಳಮ್ಮ, ಚಿಕ್ಕಣಮ್ಮ, ಸಂಘದ ಕಾರ್ಯದರ್ಶಿ ಪ್ರಕಾಶ್, ಹಾಲು ಪರೀಕ್ಷಕ ನಂಜಪ್ಪ, ರಮೇಶ್್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.