ಚಾಮರಾಜನಗರ: ಜಿಲ್ಲೆಯ ಬಿಳಿಗಿರಿರಂಗನಬೆಟ್ಟದ ಚಿಕ್ಕಸಂಪಿಗೆ ಜಾತ್ರೆಗೆ ತೆರಳಿದ್ದ ಬೇಡಗುಳಿಯ ಗಿರಿಜನ ಯುವತಿ ಮೇಲೆ ಮೂವರು ಕಿಡಿಗೇಡಿಗಳು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಪುಣಜನೂರು ಗ್ರಾಮದ ಶಿವಲಿಂಗ, ಮಹೇಶ್ ಹಾಗೂ ನಾಗೇಶ್ ಎಂಬುವರು ಈ ಕೃತ್ಯ ಎಸಗಿದ್ದು, ತಲೆತಪ್ಪಿಸಿಕೊಂಡಿದ್ದಾರೆ.
ಯುವತಿಯು ಜಾತ್ರೆಗೆ ಹೋಗಿದ್ದ ವೇಳೆ ಆರೋಪಿಗಳು ಆಕೆಯನ್ನು ಕಾಡಿನೊಳಕ್ಕೆ ಹೊತ್ತೊಯ್ದು ಅತ್ಯಾಚಾರ ಎಸಗಿದ್ದಾರೆ. ಈ ಘಟನೆಯಿಂದ ಆಘಾತಗೊಂಡ ಆಕೆ ಪೋಷಕರಿಗೆ ಮೊದಲು ಮಾಹಿತಿ ನೀಡಿಲ್ಲ.
ಆತಂಕಗೊಂಡ ಪೋಷಕರು ಆಕೆಯನ್ನು ವಿಚಾರಿಸಿದಾಗ ಘಟನೆ ಬಗ್ಗೆ ತಿಳಿಸಿದ್ದಾಳೆ. ಈ ಹಿನ್ನೆಲೆಯಲ್ಲಿ ಆಕೆಯ ಪೋಷಕರು ರಾಮಸಮುದ್ರದ ಪೂರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
`ಯುವತಿ ನೀಡಿದ ಮಾಹಿತಿ ಮೇರೆಗೆ ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕೂಡಲೇ, ಆರೋಪಿಗಳನ್ನು ಬಂಧಿಸಲಾಗುವುದು~ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರಪ್ರಸಾದ್ `ಪ್ರಜಾವಾಣಿ~ಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.