ಕೊಳ್ಳೇಗಾಲ: ನಗರದ ಭೀಮನಗರ ಬಡಾವಣೆಯ 3ನೇ ವಾರ್ಡ್ನಲ್ಲಿ ಆರಂಭವಾಗಿರುವ ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ನಿರ್ಮಾಣದ ಕಾಮಗಾರಿಯನ್ನು ಬುಧವಾರ ನಗರ ಸಭೆಯ ಪೌರಾಯುಕ್ತ ಡಿ.ಕೆ.ಲಿಂಗರಾಜು ಪರಿಶೀಲನೆ ನಡೆಸಿದರು.
ಎಸ್ಸಿಪಿ ಯೋಜನೆಯಡಿ ₹50 ಲಕ್ಷ ಅನುದಾನ ಬಿಡುಗಡೆ ಮಾಡಿದ್ದು, ಕಾಮಗಾರಿ ನಡೆಯುವ ಸ್ಥಳದಲ್ಲೇ ಇದ್ದು ಗುಣಮಟ್ಟದ ಕಾಮಗಾರಿ ಮಾಡಿಸಬೇಕು ಎಂದು ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಎಇಇ ಗಂಗಾಧರ್, ಎಇ ನಟರಾಜು, ಗುತ್ತಿಗೆದಾರ ಎಂ.ವರದರಾಜು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.