ADVERTISEMENT

ಗ್ರಾ.ಪಂ. ಉಪ ಚುನಾವಣೆ: ಅಭ್ಯರ್ಥಿಗಳ ಪ್ರಚಾರ ಬಿರುಸು

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2011, 8:05 IST
Last Updated 13 ಸೆಪ್ಟೆಂಬರ್ 2011, 8:05 IST

ಗುಂಡ್ಲುಪೇಟೆ: ಖಾಲಿ ಇರುವ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳಿಗೆ ನಡೆಯಲಿರುವ ಉಪ ಚುನಾವಣೆಗೆ ಸೋಮವಾರ ಹಲವು ಆಕಾಂಕ್ಷಿಗಳು ನಾಮಪತ್ರ ಸಲ್ಲಿಸಿದ್ದು, ಪ್ರಚಾರ ಕಾರ್ಯ ಬಿರುಸುಗೊಳಿಸಿದ್ದಾರೆ.

ತಾಲ್ಲೂಕಿನ ಕನ್ನೇಗಾಲ ಗ್ರಾ.ಪಂ.ಗೆ  ಕಾಂಗ್ರೆಸ್ ಬೆಂಬಲಿತ ಜೆ.ಎಲ್. ಜಯರಾಂ ಮಾತ್ರ ನಾಮಪತ್ರ ಸಲ್ಲಿಸಿದ ಕಾರಣ ಅವಿರೋಧ  ಆಯ್ಕೆ ನಡೆದಿದೆ.

ಬೇಗೂರಿನ 1ನೇ ಬ್ಲಾಕ್‌ಗೆ ಕಾಂಗ್ರೆಸ್ ಬೆಂಬಲಿತ ಪುಟ್ಟಸ್ವಾಮಿ, ಬಿಜೆಪಿ ಬೆಂಬಲಿತ ಮಹಾದೇವ ಹಾಗೂ ಸದಾನಂದ ನಾಮಪತ್ರ ಸಲ್ಲಿಸಿದ್ದಾರೆ. ಚಿಕ್ಕಾಟಿ ಗ್ರಾಮ ಪಂಚಾಯಿತಿಗೆ ಕಾಂಗ್ರೆಸ್ ಬೆಂಬಲಿತ ಮಹೇಶ್, ಬಿಜೆಪಿ ಬೆಂಬಲಿತ ಚಂದ್ರಶೇಖರ್, ಶಿವಣ್ಣ, ಅಣ್ಣೂರು ಗ್ರಾಮ ಪಂಚಾಯಿತಿಗೆ ಕಾಂಗ್ರೆಸ್ ಬೆಂಬಲಿತ ಪಿಣ್ಣಮ್ಮ ಹಾಗೂ ಬಿಜೆಪಿ ಬೆಂಬಲಿತ ಮುತ್ತಮ್ಮ ನಾಮಪತ್ರ ಸಲ್ಲಿಸಿದರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.