ಸಂತೇಮರಹಳ್ಳಿ: ಸಮೀಪದ ತೆಳ್ಳನೂರು ಗ್ರಾಮದಲ್ಲಿ ಖಾಸಗಿ ವ್ಯಕ್ತಿಗಳಿಂದ ಒತ್ತುವರಿಯಾಗಿದ್ದ ಕೆರೆಯನ್ನು ಕಂದಾಯ ಅಧಿಕಾರಿಗಳು ಗುರುವಾರ ತೆರವುಗೊಳಿಸಿದರು.
ಒತ್ತುವರಿಯಾಗಿರುವ ಕೆರೆಯನ್ನು ಕಂದಾಯ ಅಧಿಕಾರಿಗಳು ಪರಿಶೀಲನೆ ನಡೆಸಿದರಲ್ಲದೇ, ಉಳಿದಿರುವ ಕೆರೆಗಳ ಸರ್ವೆ ನಡೆಸಲು ಮುಂದಾಗಿರುವುದು ಜನರ ಹರ್ಷಕ್ಕೆ ಕಾರಣವಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಸಂತೇಮರಹಳ್ಳಿ ನಾಡಕಚೇರಿಯ ಉಪತಹಶೀಲ್ದಾರ್ ಪ್ರಭುರಾಜ್, ಸರ್ಕಾರದ ನಿರ್ದೇಶನ ಮತ್ತು ಜಿಲ್ಲಾಧಿಕಾರಿಯವರ ಆದೇಶದ ಮೇರೆಗೆ ಒತ್ತುವರಿಯಾಗಿರುವ ಸರ್ಕಾರಕ್ಕೆ ಸೇರಿದ ಕೆರೆಗಳು ಮತ್ತು ರಸ್ತೆಗಳನ್ನು ತೆರವುಗೊಳಿಸಲಾಗುತ್ತಿದೆ. ಗ್ರಾಮದ ಸರ್ವೆ ನಂ 23 ರಲ್ಲಿ 1.29 ಎಕರೆ ವಿಸ್ತೀರ್ಣದಲ್ಲಿ ಕೆರೆ ಇದ್ದು, 1 ಎಕರೆ ಪ್ರದೇಶ ಖಾಸಗಿ ವ್ಯಕ್ತಿಗಳಿಂದ ಒತ್ತುವರಿಯಾಗಿತ್ತು. ಒತ್ತುವರಿಯಾಗಿರುವ ಕೆರೆಯನ್ನು ಈಗಾಗಲೇ ತೆರವುಗೊಳಿಸಲಾಗಿದೆ. ಗ್ರಾಮದಲ್ಲಿ ಉಳಿದಿರುವ 3 ಕೆರೆಗಳನ್ನು ಸರ್ವೆ ಮಾಡಿ ಒತ್ತುವರಿಯಾಗಿರುವ ಸ್ಥಳವನ್ನು ತೆರವುಗೊಳಿಸಲು ಕ್ರಮಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಗ್ರಾಮಲೆಕ್ಕಿಗರಾದ ನಾಗರಾಜು, ಲಿಂಗರಾಜಮೂರ್ತಿ, ರಮೇಶ್, ಶಿವಕುಮಾರ್, ವಿಜಯರಾಜ್, ಗ್ರಾಮಸಹಾಯಕ ಬಸವಣ್ಣ, ಪುಟ್ಟರಾಜು, ರವಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.