ಚಾಮರಾಜನಗರ: ನಗರದ ವ್ಯಾಪ್ತಿ ಭಾನುವಾರ ರಾತ್ರಿ ಧಾರಾಕಾರ ಮಳೆ ಸುರಿಯಿತು.
ನ್ಯಾಯಾಲಯ ರಸ್ತೆಯಲ್ಲಿ ಮರವೊಂದು ನೆಲಕ್ಕುರುಳಿದ ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು.
ವಿದ್ಯುತ್ ಕಂಬದ ಮೇಲೆ ಮರ ಬಿದ್ದ ಪರಿಣಾಮ ಈ ಭಾಗದಲ್ಲಿ ರಾತ್ರಿ ವಿದ್ಯುತ್ ಪೂರೈಕೆ ಇಲ್ಲದೆ ನಾಗರಿಕರು ಪರದಾಡಿದರು.
ಸೋಮವಾರ ಬೆಳಿಗ್ಗೆ ನಗರಸಭೆ ಹಾಗೂ ಸೆಸ್ಕ್ ಸಿಬ್ಬಂದಿ ಮರ ತೆರವುಗೊಳಿಸಿ ಸಂಚಾರಕ್ಕೆ ಅವಕಾಶ ಕಲ್ಪಿಸಿದರು. ಯಾವುದೇ, ಪ್ರಾಣಾಪಾಯ ಸಂಭವಿಸಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.