ADVERTISEMENT

ಪಾಠದಷ್ಟೇ ಪಠ್ಯೇತರ ಚಟುವಟಿಕೆ ಮುಖ್ಯ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2018, 5:44 IST
Last Updated 20 ಏಪ್ರಿಲ್ 2018, 5:44 IST
ಸಂತೇಮರಹಳ್ಳಿ ಸಮೀಪದ ಕುದೇರು ಗ್ರಾಮದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ನಡೆದ ವಾರ್ಷೀಕೋತ್ಸವ ಸಮಾರಂಭದಲ್ಲಿ ಕ್ರೀಡೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲ ಎಚ್.ಆರ್. ಮಹದೇವಸ್ವಾಮಿ ಬಹುಮಾನ ವಿತರಿಸಿದರು
ಸಂತೇಮರಹಳ್ಳಿ ಸಮೀಪದ ಕುದೇರು ಗ್ರಾಮದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ನಡೆದ ವಾರ್ಷೀಕೋತ್ಸವ ಸಮಾರಂಭದಲ್ಲಿ ಕ್ರೀಡೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲ ಎಚ್.ಆರ್. ಮಹದೇವಸ್ವಾಮಿ ಬಹುಮಾನ ವಿತರಿಸಿದರು   

ಸಂತೇಮರಹಳ್ಳಿ: ಸಮೀಪದ ಕುದೇರು ಗ್ರಾಮದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಬುಧವಾರ ಸಾಂಸ್ಕೃತಿಕ ಚಟುವಟಿಕೆ ಹಾಗೂ ಎನ್ಎಸ್ಎಸ್ ಸಮಾರೋಪ ಸಮಾರಂಭ ನಡೆಯಿತು.

ನಿವೃತ್ತ ಪ್ರಾಂಶುಪಾಲ ಲಿಂಗಣ್ಣ ಮಾತನಾಡಿ, ವಿದ್ಯಾರ್ಥಿಗಳು ಯಾವುದೇ ಕ್ಷೇತ್ರದಲ್ಲಿ ಯಶಸ್ಸು ಗಳಿಸಬೇಕಾದರೂ ಆಯ್ಕೆ ಉತ್ತಮವಾಗಿರಬೇಕು. ನಿಮ್ಮ ಯೋಚನಾ ಶಕ್ತಿ ಪಠ್ಯ ಚಟುವಟಿಕೆಗಳಿಗೆ ಮೀಸಲಾಗಿರಬೇಕು. ಪದವಿ ನಂತರ ವಿದ್ಯಾಭ್ಯಾಸವನ್ನು ಮೊಟಕುಗೊಳಿಸಬಾರದು. ನಿಮ್ಮ ಜ್ಞಾನಾರ್ಜನೆಯನ್ನು ಹೆಚ್ಚಿಸಿಕೊಂಡು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಬೇಕು ಎಂದು ತಿಳಿಸಿದರು.

ಮೈಸೂರು ಮಹಾರಾಣಿ ಕಾಲೇಜಿನ ಪ್ರಾಧ್ಯಾಪಕಿ ಜ್ಯೋತಿ ಮಾತನಾಡಿ, ವಿದ್ಯಾರ್ಥಿಗಳಿಗೆ ಪಠ್ಯದಷ್ಟೇ ಪಠ್ಯೇತರ ಚಟುವಟಿಕೆಗಳು ಅವಶ್ಯವಾಗಿವೆ. ಈ ಹಿನ್ನೆಲೆಯಲ್ಲಿ ಕಾಲೇಜಿನಲ್ಲಿ ನಡೆಯುವ ದೈನಂದಿನ ಚಟುವಟಿಕೆಗಳು, ಎನ್ಎಸ್ಎಸ್ ಶಿಬಿರ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.

ADVERTISEMENT

ಪ್ರಾಂಶುಪಾಲ ಎಚ್.ಆರ್. ಮಹದೇವಸ್ವಾಮಿ, ಉಪನ್ಯಾಸಕರಾದ ಮಹೇಂದ್ರ, ಕೆ. ಮಧುಸೂದನ್, ಪ್ರಸನ್ನ, ಶ್ರೀನಿವಾಸ್, ಡಾ.ಶಾಂತರಾಜು, ಮಮತಾ, ಕವಿತಾ, ನಾಗೇಂದ್ರ, ಮಧು, ಪ್ರಭುಸ್ವಾಮಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.