ಕೊಳ್ಳೇಗಾಲ: ತಮಿಳುನಾಡಿನ ಕಾರು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟು, ಹಿಂಬದಿ ಸವಾರ ಪಾರಾಗಿರುವ ಘಟನೆ ತಾಲ್ಲೂಕಿನ ಜಲ್ಲಿಪಾಳ್ಯ ಗ್ರಾಮದ ಬಳಿ ಶುಕ್ರವಾರ ನಡೆದಿದೆ.
ಜಲ್ಲಿಪಾಳ್ಯ ಗ್ರಾಮದ ನಿವಾಸಿ ಪಳನಿಸ್ವಾಮಿ (45) ಮೃತಪಟ್ಟ ವ್ಯಕ್ತಿ. ಮೃತ ಪಳನಿಸ್ವಾಮಿ ಜಲ್ಲಿಪಾಳ್ಯದಿಂದ ಹೂಗ್ಯಂ ಗ್ರಾಮಕ್ಕೆ ಬೈಕ್ನಲ್ಲಿ ಸಂಬಂಧಿ ಕಾರ್ತಿಕ್(25) ಜತೆ ತೆರಳುತ್ತಿದ್ದಾಗ ಎದುರಿನಿಂದ ಬಂದ ತಮಿಳುನಾಡಿನ ಕಾರು ಡಿಕ್ಕಿ ಹೊಡೆಯಿತು. ಪರಿಣಾಮ ಬೈಕ್ ಸವಾರಿ ಮಾಡುತ್ತಿದ್ದ ಪಳನಿಸ್ವಾಮಿ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರು. ಹಿಂಬದಿಯಲ್ಲಿ ಕುಳಿತಿದ್ದ ಕಾರ್ತಿಕ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾರಿನ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ. ರಾಮಾಪುರ ಪೊಲೀಸರು ಈ ಸಂಬಂಧ ದೂರು ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.