ಚಾಮರಾಜನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಆತ್ಮೀಯರು ಎನ್ನಲಾದ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಆರ್.ಉಮೇಶ್ ಅವರ ನಿವಾಸದ ಮೇಲೆ ಶನಿವಾರ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದರು.
ಮೈಸೂರು ಮತ್ತು ಬೆಂಗಳೂರಿನಿಂದ ಬಂದಿದ್ದ 14 ಮಂದಿ ಅಧಿಕಾರಿಗಳು, ನ್ಯಾಯಾಲಯದ ರಸ್ತೆಯಲ್ಲಿರುವ ಉಮೇಶ್ ಅವರ ಮನೆಯಲ್ಲಿ ಲೆಕ್ಕಪತ್ರಗಳು, ಆಸ್ತಿ ವಹಿವಾಟಿನ ದಾಖಲೆಗಳನ್ನು ವಶಕ್ಕೆ ಪಡೆದರು. ದಾಳಿ ನಡೆದಾಗ ಮನೆಯಲ್ಲಿ ಉಮೇಶ್ ಇರಲಿಲ್ಲ. ನಂತರ, ಮನೆಗೆ ಬಂದ ಅವರನ್ನು ವಿಚಾರಣೆಗೆ ಒಳಪಡಿಸಿದರು. ಅವರಿಗೆ ಸೇರಿದ ಅಂಗಡಿಗಳ ಮೇಲೂ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.