ADVERTISEMENT

ಸುವರ್ಣಾವತಿ ಜಲಾಶಯಕ್ಕೆ ಬಾಗಿನ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2017, 6:00 IST
Last Updated 20 ಅಕ್ಟೋಬರ್ 2017, 6:00 IST
ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣಗೌಡರ ಬಣದ ಜಿಲ್ಲಾ ಘಟಕ ಹಾಗೂ ಯುವ ಘಟಕದಿಂದ ಬಾಗಿನ ಅರ್ಪಿಸಲಾಯಿತು
ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣಗೌಡರ ಬಣದ ಜಿಲ್ಲಾ ಘಟಕ ಹಾಗೂ ಯುವ ಘಟಕದಿಂದ ಬಾಗಿನ ಅರ್ಪಿಸಲಾಯಿತು   

ಚಾಮರಾಜನಗರ: ಭರ್ತಿಯಾಗಿರುವ ಸುವರ್ಣಾವತಿ ಜಲಾಶಯಕ್ಕೆ ಇತ್ತೀಚೆಗೆ ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣಗೌಡರ ಬಣದ ಜಿಲ್ಲಾ ಘಟಕ ಹಾಗೂ ಯುವ ಘಟಕದಿಂದ ಬಾಗಿನ ಅರ್ಪಿಸಲಾಯಿತು.

ಬಳಿಕ ವೇದಿಕೆಯ ಜಿಲ್ಲಾ ಉಸ್ತುವಾರಿ ಪ್ರವೀಣ್‌ಕುಮಾರ್ ಮಾತನಾಡಿ, ತಾಲ್ಲೂಕಿನ ಜೀವನಾಡಿಯಾದ ಸುವರ್ಣಾವತಿ, ಚಿಕ್ಕಹೊಳೆ ಜಲಾಶಯಗಳು ಭರ್ತಿಗೊಂಡು ಈ ಭಾಗದ ಜನರಲ್ಲಿ ಸಂತಸ ಮೂಡಿಸಿದೆ ಎಂದು ಹೇಳಿದರು.

ಜಿಲ್ಲೆಯ ಜನರಿಗೆ ನೀರಾವರಿ ಭೂಮಿ ಕೊಡಿಸಲು ಕರವೇ ಸಿದ್ಧತೆ ನಡೆಸಿದ್ದು, ಮುಂದಿನ ದಿನಗಳಲ್ಲಿ ರಾಜ್ಯ ಘಟಕದ ಅಧ್ಯಕ್ಷ ನಾರಾಯಣಗೌಡ ಅವರ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಬೃಹತ್ ಹೋರಾಟ ರೂಪಿಸಲಾಗುವುದು ಎಂದರು. ವೇದಿಕೆಯ ಜಿಲ್ಲಾ ಯುವ ಘಟಕದ ಅಧ್ಯಕ್ಷ ಆರ್.ಕೆ. ನವೀನ್‌ಕುಮಾರ್ ಮಾತನಾಡಿದರು.

ADVERTISEMENT

ಜಿಲ್ಲಾ ಘಟಕದ ಉಪಾಧ್ಯಕ್ಷ ರಾಜೇಂದ್ರ ವಿ. ನಾಯಕ್, ಸಂಘಟನಾ ಕಾರ್ಯದರ್ಶಿ ಜಗದೀಶ್, ಮೈಸೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಚಂದ್ರ, ಕಾರ್ಯದರ್ಶಿ ಲೋಕೇಶ್, ಗುಂಡ್ಲುಪೇಟೆ ಟೌನ್ ಅಧ್ಯಕ್ಷ ರಮೇಶ್‌ನಾಯಕ್, ಟೌನ್ ಅಧ್ಯಕ್ಷ ಸುರೇಶ್‌ನಾಯಕ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.