ಹನೂರು: ತಾಲ್ಲೂಕಿನ ಹಲಗಾಪುರ ಬಳಿ ಐಷರ್ ಮಿನಿಲಾರಿ ಪಲ್ಟಿಯಾಗಿ 35ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅವರನ್ನು
37 ಮಂದಿ ಕೊಳ್ಳೇಗಾಲದ ಸರ್ಕಾರಿ ಉಪವಿಭಾಗ ಆಸ್ಪತ್ರೆಗೆ ದಾಖಲಾಗಿದ್ದಾರೆ. ಐವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶನಿವಾರ ಬೆಳಿಗ್ಗೆ ಹುತ್ತೂರು ಗ್ರಾಮದ 30ಕ್ಕೂ ಹೆಚ್ಚು ಮಂದಿ ಜನರು ಶಾಗ್ಯ ಗ್ರಾಮದಲ್ಲಿ ತಮ್ಮ ಕುಟುಂಬದ ಅಂತ್ಯ ಸಂಸ್ಕಾರಕ್ಕೆ ಮುಗಿಸಿಕೊಂಡು ಸ್ವಗ್ರಾಮಕ್ಕೆ ಮರಳುತ್ತಿದ್ದ ವೇಳೆ ಹಲಗಾಪುರ ಗ್ರಾಮದ ಬಳಿ ಮಿನಿಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಲಾರಿಯಲ್ಲಿದ್ದ 35ಕ್ಕೂ ಹೆಚ್ಚು ಜನರಿಗೂ ಗಾಯಗಳಾಗಿವೆ.
ಗಾಯಾಳುಗಳನ್ನು ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ನಂತರ ಹಲವರನ್ನು ಕೊಳ್ಳೇಗಾಲದ ಉಪವಿಭಾಗ ಆಸ್ಪತ್ರೆಗೆ ಹಾಗೂ 12 ಮಂದಿಯನ್ನು ಕಾಮಗೆರೆಯ ಹೋಲಿಕ್ರಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೋಲಿಕ್ರಾಸ್ ಆಸ್ಪತ್ರೆಗೆ ದಾಖಲಿಸಿದವರಲ್ಲಿ ಇಬ್ಬರು ಹಾಗೂ ಕೊಳ್ಳೇಗಾಲ ಉಪ ವಿಭಾಗದ ಆಸ್ಪತ್ರೆಗೆ ದಾಖಲಾದವರಲ್ಲಿ ಮೂವರನ್ನು ಮೈಸೂರಿಗೆ ಕರೆದುಕೊಂಡು ಹೋಗಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.