ಕೊಳ್ಳೇಗಾಲ: ನಗರದ ಸರ್ಕಾರಿ ಆಸ್ಪತ್ರೆ ರಸ್ತೆಯ ಎ.ಡಿ.ಬಿ ವೃತದಲ್ಲಿ ಇರುವ ಒಳ ಚರಂಡಿ ಪೈಪು ಒಡೆದು ಮಲ ಮಿಶ್ರಿತ ನೀರು ಬಾರಿ ಪ್ರಮಾಣದಲ್ಲಿ 2 ದಿನಗಳಿಂದ ರಸ್ತೆ ಮೇಲೆ ಹರಿಯುತ್ತಿದೆ. ಇದರಿಂದಾಗಿ ಸಾರ್ವಜನಿಕರಿಗೆ ಅಲ್ಲಿ ಸಂಚರಿಸುವುದೇ ಕಷ್ಟವಾಗಿದೆ.
ಎದುರುಗಡೆ ಸಾರ್ವಜನಿಕ ಆಸ್ಪತ್ರೆ, ಸಮೀಪದಲ್ಲಿ ನ್ಯಾಯಾಲಯ ಮತ್ತು ತಾಲ್ಲೂಕು ಕಚೇರಿ ಮುಂಭಾಗ, ಮಹ ದೇಶ್ವರ ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಕೊಳಚೆ ನೀರು ನದಿಯಂತೆ ಹರಿಯುತ್ತಿದ್ದರೂ ಅಧಿಕಾರಿಗಳು, ಜನಪ್ರತಿನಿಧಿಗಳು ಕ್ರಮಕೈಗೊಂಡಿಲ್ಲ ಎಂದು ಸ್ಥಳೀಯ ನಿವಾಸಿ ಎಸ್.ನಿಖಿಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.