ADVERTISEMENT

ಹನೂರು: ಕಾಡಾನೆ ದಾಳಿ, ವ್ಯಕ್ತಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 28 ಜನವರಿ 2022, 8:05 IST
Last Updated 28 ಜನವರಿ 2022, 8:05 IST
   

ಹನೂರು (ಚಾಮರಾಜನಗರ): ತಾಲ್ಲೂಕಿನ ಚಂಗಡಿಯಿಂದ ಕೌದಳ್ಳಿ ಗ್ರಾಮಕ್ಕೆ ತೆರಳುತ್ತಿದ್ದ ಮುನಿವೆಂಕಟೇಗೌಡ ಎಂಬುವವರ ಮೇಲೆ ಶುಕ್ರವಾರ ಬೆಳಿಗ್ಗೆ ಕಾಡಾನೆಯೊಂದು ದಾಳಿ‌‌ ನಡೆಸಿ ಗಾಯಗೊಳಿಸಿದೆ.ಚಿಕಿತ್ಸೆಗಾಗಿ ಅವರನ್ನು ಕೊಳ್ಳೇಗಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುನಿವೆಂಕಟೇಗೌಡ ಅವರು ಮಲೆ ಮಹದೇಶ್ವರ ವನ್ಯಧಾಮದ ವ್ಯಾಪ್ತಿಯಲ್ಲಿರುವ ಚಂಗಡಿ ಗ್ರಾಮದಿಂದ ಕೌದಳ್ಳಿಯಲ್ಲಿ ನಡೆಯುವ ಸಂತೆಗೆ ನಡೆದುಕೊಂಡು ಹೋಗುತ್ತಿದ್ದರು. ಕಾಡಿನ ದಾರಿ ಮಧ್ಯೆ, ಒಂಟಿ ಆನೆಯೊಂದು ದಾಳಿ ಮಾಡಿದೆ. ಮುನಿವೆಂಕಟೇಗೌಡ ಅವರ ಬಲಕಾಲು ಮುರಿದಿದೆ. ಸೊಂಟದ ಭಾಗಕ್ಕೂ ಗಾಯವಾಗಿದೆ.ಅವರನ್ನು ಚಿಕಿತ್ಸೆಗಾಗಿ ಕೊಳ್ಳೇಗಾಲ ಸರ್ಕಾರಿ ಉಪ ವಿಭಾಗ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾಡಿನ ಮಧ್ಯೆ ಇರುವ ಈ ಗ್ರಾಮದಲ್ಲಿ ಮೂಲಸೌಕರ್ಯದ ಕೊರತೆ ಒಂದೆಡೆಯಾದರೆ ವನ್ಯಪ್ರಾಣಿಗಳ ಹಾವಳಿ ಇಲ್ಲಿನ ಗ್ರಾಮಸ್ಥರನ್ನು ಹೈರಾಣಾಗಿಸಿದೆ. ಇದರಿಂದ ಬೇಸತ್ತಿರುವ ಗ್ರಾಮಸ್ಥರು ಅರಣ್ಯದಿಂದ ಹೊರಗೆ ಬರುವುದಾಗಿ ಒಪ್ಪಿಕೊಂಡಿದ್ದಾರೆ. ಇದಕ್ಕೆ ಸಮ್ಮತಿಸಿರುವ ಅರಣ್ಯ ಇಲಾಖೆ ಪುನರ್ವಸತಿ ಕಲ್ಪಿಸಲು ಸರ್ಕಾರಕ್ಕೆ ವರದಿ ಸಲ್ಲಿಸಿದೆ.

ADVERTISEMENT

ಆದರೆ, ವರದಿ ಸಲ್ಲಿಸಿ ಆರು ತಿಂಗಳಾದರೂ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.