ಗುಂಡ್ಲುಪೇಟೆ: ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ ಬೇಗೂರಿನ ಸಂತೇಮಾಳ ಸಮೀಪ ವಾಹನ ಡಿಕ್ಕಿಯಾಗಿ ಪಾದಚಾರಿ ತೊಂಡವಾಡಿಯ ರವಿಚಂದ್ರ (35) ಮೃತಪಟ್ಟಿದ್ದಾರೆ.
ಈತ ಹೆದ್ದಾರಿ ರಸ್ತೆ ಬದಿ ಶನಿವಾರ ರಾತ್ರಿ ನಡೆದುಕೊಂಡು ಹೋಗುತ್ತಿದ್ದಾಗ ವಾಹನ ಡಿಕ್ಕಿಯಾಗಿ ಫುಟ್ಪಾತ್ ಪಕ್ಕದಲ್ಲಿ ಬಿದ್ದಿದ್ದಾರೆ. ನಂತರ ಆತನ ಮೃತದೇಹ ಸೋಮವಾರ ಪತ್ತೆಯಾಗಿದೆ.
ಸುದ್ದಿ ತಿಳಿದ ಬೇಗೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.