ADVERTISEMENT

ಮದುವೆ ಮುಗಿಸಿಕೊಂಡು ಬರುತ್ತಿದ್ದಾಗ ವಾಹನ ಪಲ್ಟಿ: ಮೂವರ ಸಾವು

​ಪ್ರಜಾವಾಣಿ ವಾರ್ತೆ
Published 15 ಜೂನ್ 2020, 14:09 IST
Last Updated 15 ಜೂನ್ 2020, 14:09 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಹನೂರು (ಚಾಮರಾಜನಗರ): ಮದುವೆ ಮುಗಿಸಿಕೊಂಡು ಗ್ರಾಮಕ್ಕೆ ವಾಪಸ್ಸಾಗುತ್ತಿದ್ದಾಗ ತಾಲ್ಲೂಕಿನ ಕೊರಮನಕತ್ತರಿ ಜೆ. ವಿಲೇಜ್ ಬಳಿ ಬೊಲೆರೊ ಪಿಕ್‌ಅಪ್ ವಾಹನ ಪಲ್ಟಿಯಾಗಿ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು, 15 ಮಂದಿ ಗಾಯಗೊಂಡಿದ್ದಾರೆ.

ತಾಲ್ಲೂಕಿನ ಹುಣಸೆಪಾಳ್ಯದ ಚಿಕ್ಕಸಿದ್ದಮ್ಮ (55), ನಂಜುಂಡಯ್ಯ (60), ಸೀಮೆಎಣ್ಣೆ ನಾಗ (55) ಮೃತರು.

ಮಧುವನಹಳ್ಳಿಯಲ್ಲಿ ಸಂಬಂಧಿಕರ ಮದುವೆಗೆಂದು ತೆರಳಿದ್ದ ಹುಣಸೇಪಾಳ್ಯದ ಹಲವರು ವಾಪಸ್‌ ಬರುತ್ತಿದ್ದರು. ಕೊರಮನಕತ್ತರಿ ಜೆ. ವಿಲೇಜ್‌ ಬಳಿ ತಿರುವಿನಲ್ಲಿ ನಿಯಂತ್ರಣ ತಪ್ಪಿ ವಾಹನ ಉರುಳಿ ಬಿದ್ದಿದೆ.

ADVERTISEMENT

ಗಾಯಾಳುಗಳ ಪೈಕಿ ಒಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರನ್ನು ಒಡೆಯರಪಾಳ್ಯ, ಹನೂರು ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಹೋಲಿಕ್ರಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.