ADVERTISEMENT

ಸಕ್ರಿಯ ಪ್ರಕರಣ 468ಕ್ಕೆ ಇಳಿಕೆ

​ಪ್ರಜಾವಾಣಿ ವಾರ್ತೆ
Published 8 ಜುಲೈ 2021, 15:57 IST
Last Updated 8 ಜುಲೈ 2021, 15:57 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಗುರುವಾರ 41 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 51 ಮಂದಿ ಗುಣಮುಖರಾಗಿದ್ದಾರೆ. ಸಾವು ಸಂಭವಿಸಿಲ್ಲ.

ಸಕ್ರಿಯ ಪ್ರಕರಣಗಳ ಸಂಖ್ಯೆ 468ಕ್ಕೆ ಇಳಿದಿದೆ. ಸೋಂಕಿತರ ಪೈಕಿ 27 ಮಂದಿ ಐಸಿಯುನಲ್ಲಿ ಹಾಗೂ 20 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ.

ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 31,232ಕ್ಕೆ ಏರಿದೆ. 30,255 ಮಂದಿ ಗುಣಮುಖರಾಗಿದ್ದಾರೆ.

ADVERTISEMENT

ಗುರುವಾರ 1,724 ಮಂದಿಯ ಗಂಟಲು ದ್ರವದ ಪರೀಕ್ಷಾ ವರದಿ ಬಂದಿದ್ದು, 1682 ವರದಿಗಳು ನೆಗೆಟಿವ್ ಬಂದಿವೆ. 42 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. ಜಿಲ್ಲಾಡಳಿತವು ತನ್ನ ವರದಿಯಲ್ಲಿ 41 ಪ್ರಕರಣಗಳನ್ನು ಉಲ್ಲೇಖಿಸಿದೆ.

41 ಮಂದಿ ಸೋಂಕಿತರಲ್ಲಿ 19 ಮಂದಿ ಚಾಮರಾಜನಗರ ತಾಲ್ಲೂಕಿನವರು. ಗುಂಡ್ಲುಪೇಟೆಯ ಐವರು, ಕೊಳ್ಳೇಗಾಲದ ಆರು, ಹನೂರಿನ ಐವರು ಹಾಗೂ ಯಳಂದೂರು ತಾಲ್ಲೂಕಿನ ಆರು ಮಂದಿ ಇದ್ದಾರೆ.

ಚಾಮರಾಜನಗರ ತಾಲ್ಲೂಕಿನ ಒಂಬತ್ತು, ಗುಂಡ್ಲುಪೇಟೆಯ 10, ಕೊಳ್ಳೇಗಾಲದ 11, ಹನೂರಿನ 18, ಯಳಂದೂರು ತಾಲ್ಲೂಕಿನ ಒಬ್ಬರು ಹಾಗೂ ಹೊರ ಜಿಲ್ಲೆಯ ಇಬ್ಬರು ಸೇರಿ 51 ಮಂದಿ ಗುಣಮುಖರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.