ADVERTISEMENT

ಹಾವು ಕಡಿದು ಕೃಷಿ ಕಾರ್ಮಿಕ ಸಾವು

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2020, 15:55 IST
Last Updated 1 ಆಗಸ್ಟ್ 2020, 15:55 IST
ಮಲ್ಲಣ್ಣ
ಮಲ್ಲಣ್ಣ   

ಸಂತೇಮರಹಳ್ಳಿ: ಹೋಬಳಿಯ ನವಿಲೂರು ಗ್ರಾಮದ ಗಣಗನೂರು ಎಂಬ ಪ್ರದೇಶದ ತೋಟವೊಂದರಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾಗ ನಾಗರಹಾವು ಕಚ್ಚಿ ಕೃಷಿ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ.

ನವಿಲೂರು ಗ್ರಾಮದ ನಿವಾಸಿ ಮಲ್ಲಣ್ಣ (47) ಮೃತಪಟ್ಟವರು. ಗಣಗನೂರು ಸಂತೇ ಮಾಳದ ಹತ್ತಿರ ಬೆಂಗಳೂರಿನ ಅಶೋಕ ಎಂಬುವರಿಗೆ ಸೇರಿದ ಜಮೀನಿನಲ್ಲಿ ಮಲ್ಲಣ್ಣ ಅವರು ಎಂದಿನಂತೆ ಬೆಳಗ್ಗೆ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದರು. ಈ ಸಂದರ್ಭದಲ್ಲಿ ಅವರಿಗೆ ಹಾವು ಕಚ್ಚಿದೆ. ತಕ್ಷಣ ಅವರನ್ನು ಕಾಮಗೆರೆ ಹೋಲಿಕ್ರಾಸ್‌ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ, ಮಾರ್ಗ ಮಧ್ಯೆಯಲ್ಲಿ ಮೃತಪಟ್ಟರು ಎಂದು ಗೊತ್ತಾಗಿದೆ.

ಮೃತರ ಅಂತ್ಯಕ್ರಿಯೆ ಶನಿವಾರ ಮಧ್ಯಾಹ್ನ ನಡೆಯಿತು. ಕುದೇರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.