ಸಂತೇಮರಹಳ್ಳಿ: ಹೋಬಳಿಯ ನವಿಲೂರು ಗ್ರಾಮದ ಗಣಗನೂರು ಎಂಬ ಪ್ರದೇಶದ ತೋಟವೊಂದರಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾಗ ನಾಗರಹಾವು ಕಚ್ಚಿ ಕೃಷಿ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ.
ನವಿಲೂರು ಗ್ರಾಮದ ನಿವಾಸಿ ಮಲ್ಲಣ್ಣ (47) ಮೃತಪಟ್ಟವರು. ಗಣಗನೂರು ಸಂತೇ ಮಾಳದ ಹತ್ತಿರ ಬೆಂಗಳೂರಿನ ಅಶೋಕ ಎಂಬುವರಿಗೆ ಸೇರಿದ ಜಮೀನಿನಲ್ಲಿ ಮಲ್ಲಣ್ಣ ಅವರು ಎಂದಿನಂತೆ ಬೆಳಗ್ಗೆ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದರು. ಈ ಸಂದರ್ಭದಲ್ಲಿ ಅವರಿಗೆ ಹಾವು ಕಚ್ಚಿದೆ. ತಕ್ಷಣ ಅವರನ್ನು ಕಾಮಗೆರೆ ಹೋಲಿಕ್ರಾಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ, ಮಾರ್ಗ ಮಧ್ಯೆಯಲ್ಲಿ ಮೃತಪಟ್ಟರು ಎಂದು ಗೊತ್ತಾಗಿದೆ.
ಮೃತರ ಅಂತ್ಯಕ್ರಿಯೆ ಶನಿವಾರ ಮಧ್ಯಾಹ್ನ ನಡೆಯಿತು. ಕುದೇರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.