ADVERTISEMENT

ಹೆಗ್ಗವಾಡಿಗೆ ಯಶವಂತರಾವ್ ಅಂಬೇಡ್ಕರ್ ಭೇಟಿ, ಸಾಂತ್ವನ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2023, 16:12 IST
Last Updated 12 ಮಾರ್ಚ್ 2023, 16:12 IST
ಡಾ.ಬಿ.ಆರ್.ಅಂಬೇಡ್ಕರ್ ಅವರ ಮೊಮ್ಮಗ ಭೀಮರಾವ್ ಯಶವಂತರಾವ್ ಅಂಬೇಡ್ಕರ್ ಅವರು ಧ್ರುವನಾರಾಯಣ ಅವರ ಮಗ, ಪತ್ನಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು
ಡಾ.ಬಿ.ಆರ್.ಅಂಬೇಡ್ಕರ್ ಅವರ ಮೊಮ್ಮಗ ಭೀಮರಾವ್ ಯಶವಂತರಾವ್ ಅಂಬೇಡ್ಕರ್ ಅವರು ಧ್ರುವನಾರಾಯಣ ಅವರ ಮಗ, ಪತ್ನಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು   

ಚಾಮರಾಜನಗರ: ಡಾ.ಬಿ.ಆರ್.ಅಂಬೇಡ್ಕರ್ ಅವರ ಮೊಮ್ಮಗ ಭೀಮರಾವ್ ಯಶವಂತರಾವ್ ಅಂಬೇಡ್ಕರ್ ಅವರು ತಾಲ್ಲೂಕಿನ ಹೆಗ್ಗವಾಡಿಯ ಧ್ರುವನಾರಾಯಣ ಮನೆಗೆ ಭೇಟಿ ನೀಡಿ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು.

ಪತ್ನಿ ವೀಣಾ, ಮಕ್ಕಳಾದ ದರ್ಶನ್ ಹಾಗೂ ಧೀರೇನ್ ಅವರಿಗೆ ಧೈರ್ಯ ತುಂಬಿದ ಯಶವಂತರಾವ್, ‘ಧ್ರುವನಾರಾಯಣ ಬಹಳ ಸಜ್ಜನಿಕೆಯುಳ್ಳ ಅದರ್ಶ ರಾಜಕಾರಣಿಯಾಗಿದ್ದರು. ಕ್ರಿಯಾಶೀಲರಾಗಿ ಎಲ್ಲ ವರ್ಗದ ಜನರ ಜೊತೆಗೆ ಉತ್ತಮ ಒಡನಾಟ ಹೊಂದಿದ್ದರು. ಅವರ ಅಕಾಲಿಕ ನಿಧನ ಕುಟುಂಭಕ್ಕೆ ಅಷ್ಟೇ ಅಲ್ಲ ಸಮಾಜಕ್ಕು ತುಂಬಲಾರದ ನಷ್ಟವಾಗಿದೆ’ ಎಂದು ಕಂಬಿನಿ ಮಿಡಿದರು.

ದಲಿತ ಮುಖಂಡ ವೆಂಕಟರಮಣಸ್ವಾಮಿ (ಪಾಪು), ವಕೀಲರಾದ ಪುಟ್ಟಸ್ವಾಮಿ ರಾಮಸಮುದ್ರ, ಗಂಗಾಧರ್ ಇತರರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.