ಗುಂಡ್ಲುಪೇಟೆ: ಪಟ್ಟಣದ ಜವಹರ್ ಎಜುಕೇಷನ್ ಟ್ರಸ್ಟ್ (ರಿ)ನಿಂದ ಶನಿವಾರ(ಇಂದು) ಸಂಜೆ 5ಕ್ಕೆ ಶಾಲಾ ಕಾಲೇಜುಗಳ ವಾರ್ಷಿಕೋತ್ಸವ ಹಾಗೂ 2023-24 ನೇ ಸಾಲಿನ ವಿದ್ಯಾರ್ಥಿ ಸಂಘಗಳ ಸಮಾರೋಪ ಸಮಾರಂಭ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಟ್ರಸ್ಟ್ ಅಧ್ಯಕ್ಷ ಎಸ್. ರಾಜಶೇಖರ್ ವಹಿಸುವರು. ಪ್ರಾಸ್ತಾವಿಕ ನುಡಿ ಗೌರವ ಕಾರ್ಯದರ್ಶಿ ಎಂ.ಪಿ.ಸುನೀಲ್, ಕಾರ್ಯಕ್ರಮದ ಉದ್ಘಾಟನೆ ಮತ್ತು ಭಾಷಣವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಂಜುನಾಥ ಪ್ರಸನ್ನ, ಮುಖ್ಯ ಭಾಷಣಕಾರರಾಗಿ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ರಾಮಚಂದ್ರ ರಾಜೇ ಅರಸ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.