ADVERTISEMENT

ಕೋವಿಡ್‌ನಿಂದ ಸಾವು; ಸಂಬಂಧಿಕರಿಂದ ಆಸ್ಪತ್ರೆಯ ಮೇಲೆ ದಾಳಿ

​ಪ್ರಜಾವಾಣಿ ವಾರ್ತೆ
Published 14 ಮೇ 2021, 8:31 IST
Last Updated 14 ಮೇ 2021, 8:31 IST
ಪ್ರತಿಭಟನೆ ನಡೆಸುತ್ತಿದ್ದ ಆಸ್ಪತ್ರೆ ಸಿಬ್ಬಂದಿಯನ್ನು ಪೊಲೀಸರು ಸಮಾಧಾನಪಡಿಸಿದರು
ಪ್ರತಿಭಟನೆ ನಡೆಸುತ್ತಿದ್ದ ಆಸ್ಪತ್ರೆ ಸಿಬ್ಬಂದಿಯನ್ನು ಪೊಲೀಸರು ಸಮಾಧಾನಪಡಿಸಿದರು   

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಆಸ್ಪತ್ರೆಯಲ್ಲಿ ಕೋವಿಡ್ ರೋಗಿಯೊಬ್ಬರು ಮೃತಪಟ್ಟಿದ್ದು, ಆಕ್ರೋಶಗೊಂಡ ರೋಗಿಯ ಸಂಬಂಧಿಕರು ಆಸ್ಪತ್ರೆಯ ಮೇಲೆ ಗುರುವಾರ ದಾಳಿ ನಡೆಸಿದ್ದಾರೆ.

ಈ ವೇಳೆ ಆಸ್ಪತ್ರೆಯ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ. ಆಮ್ಲಜನಕದ ಸಿಲಿಂಡರ್‌ ಎತ್ತಿ ಎಸೆದಿದ್ದಲ್ಲದೇ, ತಡೆಯಲು ಮುಂದಾದ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿಯ ಮೇಲೂ ಹಲ್ಲೆಗೆ ಮುಂದಾಗಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಗುಂಪನ್ನು ಚದುರಿಸಿದ್ದಾರೆ.

ಕಿಟಕಿ ಗಾಜುಗಳನ್ನು ಕೈಯಿಂದ ಒಡೆದು, ಗಾಯಗೊಂಡಿದ್ದ ಗಿರೀಶ್‌ ಮತ್ತು ಬಂಗಾರು ಎಂಬುವವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ADVERTISEMENT

ಘಟನೆಯನ್ನು ಖಂಡಿಸಿ, ವೈದ್ಯಕೀಯ ಸಿಬ್ಬಂದಿ ಕೆಲ ಹೊತ್ತು ಪ್ರತಿಭಟನೆ ನಡೆಸಿದರು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಬಳಿಕ ಕೆಲಸಕ್ಕೆ ಮರಳಿದರು ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.